ಹಾವೇರಿ: ರಾಜ್ಯದ 141 ವಿಶೇಷ ಶಾಲೆಗಳಿಗೆ ಶಿಶು ಕೇಂದ್ರೀಕೃತ ಸಹಾಯಧನ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕ/ ಶಿಕ್ಷಕಕೇತರ ಸಿಬ್ಬಂದಿಯ ಗೌರವಧನವನ್ನು ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು.
ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಸರಿಯಾದ ಸಮಯದಲ್ಲಿ ಗೌರವಧನ ದೊರಕದೆ ಹತಾಶರಾಗಿದ್ದಾರೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ಗಳು ಯಾವುದೇ ಸಿಬ್ಬಂದಿಯ ವೇತನ ಕಡಿತಗೊಳಿಸಬಾರದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿವೆ. ಹೀಗಾಗಿ ಸಂಕಷ್ಟದಲ್ಲಿರುವ ನಮಗೆ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಎಚ್.ಆರ್. ಶಿವಕುಮಾರ, ಕಾರ್ಯದರ್ಶಿ ಎಚ್.ಜೆ.ಜಾಡರ, ಖಜಾಂಚಿ ಸುಭಾಸ ಮಲ್ಲಾಡದ ಮುಂತಾದವರು ಪಾಲ್ಗೊಂಡಿದ್ದರು.