ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಭು ಚೌಹಾಣ್‌ಗೆ ಸಚಿವ ಸ್ಥಾನ ನೀಡಿ: ಕುಮಾರ ಮಹಾರಾಜರು

Last Updated 30 ಜುಲೈ 2021, 16:14 IST
ಅಕ್ಷರ ಗಾತ್ರ

ಹಾವೇರಿ: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದ ಕಲ್ಯಾಣ ಕರ್ನಾಟಕದ ನಾಯಕ ಮತ್ತು ಬೀದರ್‌ ಜಿಲ್ಲೆ ಅಭಿವೃದ್ಧಿ ಹರಿಕಾರ ಮಾಜಿ ಸಚಿವ ಪ್ರಭು ಚೌಹಾಣ್‌ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಕೃಷ್ಣಾಪುರದ ಸೇವಾಲಾಲ್‌ ಬಂಜಾರ ಗುರುಪೀಠದ ಕುಮಾರ ಮಹಾರಾಜರು ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಪಶುಸಂಗೋಪನೆ, ಹಜ್‌ ಮತ್ತು ವಕ್ಫ್‌ ಬೋರ್ಡ್‌ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಪ್ರಾಣಿಗಳ ಮೂಕವೇದನೆಗೆ ಧ್ವನಿಯಾಗಿ ದೇಶದಲ್ಲೇ ವಿನೂತನ ಪ್ರಯೋಗ ಮಾಡಿ, ಪ್ರಾಣಿ ಕಲ್ಯಾಣ ಸಹಾಯವಾಣಿ ಆರಂಭಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಗಿರೀಶ ಡಿ.ಆರ್‌.,ಸೇವಾಲಾಲ್‌ ಬಂಜಾರ ಸಂಘದ ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ಉಷಾನಾಯ್ಕ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಪೂಜಾರ್‌, ಮಂಜುಳಾ, ಸುನಿಲ್‌ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT