ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಬೋರ್ಡ್ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಪ್ರಾಣಿಗಳ ಮೂಕವೇದನೆಗೆ ಧ್ವನಿಯಾಗಿ ದೇಶದಲ್ಲೇ ವಿನೂತನ ಪ್ರಯೋಗ ಮಾಡಿ, ಪ್ರಾಣಿ ಕಲ್ಯಾಣ ಸಹಾಯವಾಣಿ ಆರಂಭಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.