<p><strong>ರಟ್ಟೀಹಳ್ಳಿ:</strong> ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಅಚಲವಾದ ನಂಬಿಕೆ, ವಿಶ್ವಾಸ ಇರಿಸಬೇಕು ಎಂದು ಪ್ರಿಯದರ್ಶಿನಿ ಮಹಾವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಸಾಲಿ ಹೇಳಿದರು.</p>.<p>ಅವರು ಸೋಮವಾರ ಕಾಲೇಜು ಸಭಾಭವನದಲ್ಲಿ ಜರುಗಿದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಇಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಸುವ ವ್ಯವಸ್ಥೆ ಇದೆ. ಇಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ್ಯ ಹಾಗೂ ಕರ್ತವ್ಯಗಳಿವೆ. ಎಲ್ಲರೂ ಸಮಾನರಾಗಿದ್ದಾರೆ’ ಎಂದು ಹೇಳಿದರು.</p>.<p>ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ವೈ.ವೈ. ಮರಳೀಹಳ್ಳಿ ಮಾತನಾಡಿ, ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣರಾಗಬಲ್ಲರು ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ರಾಘವೇಂದ್ರ ಎ.ಜಿ. ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎಚ್. ಬಿ. ಕೆಂಚಳ್ಳಿ, ಸಿ.ಎಸ್. ಕಮ್ಮಾರ, ವಿ.ಎಸ್. ರೂಳಿ, ಶಾಂತಮ್ಮ ಎಚ್. ಎಂ.ಎಂ. ಪ್ಯಾಟಿ, ಬಿ.ಸಿ. ತಿಮ್ಮೇನಹಳ್ಳಿ, ಸತೀಶ ಮಡಿವಾಳರ, ಉಮೇಶ ಎನ್.ಕೆ. ಎಂ.ಅರ್. ಅಂಚಿ , ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್.ಎಸ್. ತಾಂದಳೆ, ಯಲ್ಲಪ್ಪ ಸುರಗೀಹಳ್ಳಿ, ಕವಿತಾ ಹಿರೇಗೌಡರ, ಆಸ್ಮಾ ಆಲದಕಟ್ಟಿ, ಪರ್ವಿನಬಾನು ದೊಡ್ಡಮನಿ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ:</strong> ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಅಚಲವಾದ ನಂಬಿಕೆ, ವಿಶ್ವಾಸ ಇರಿಸಬೇಕು ಎಂದು ಪ್ರಿಯದರ್ಶಿನಿ ಮಹಾವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಸಾಲಿ ಹೇಳಿದರು.</p>.<p>ಅವರು ಸೋಮವಾರ ಕಾಲೇಜು ಸಭಾಭವನದಲ್ಲಿ ಜರುಗಿದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಇಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಸುವ ವ್ಯವಸ್ಥೆ ಇದೆ. ಇಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ್ಯ ಹಾಗೂ ಕರ್ತವ್ಯಗಳಿವೆ. ಎಲ್ಲರೂ ಸಮಾನರಾಗಿದ್ದಾರೆ’ ಎಂದು ಹೇಳಿದರು.</p>.<p>ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ವೈ.ವೈ. ಮರಳೀಹಳ್ಳಿ ಮಾತನಾಡಿ, ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣರಾಗಬಲ್ಲರು ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ರಾಘವೇಂದ್ರ ಎ.ಜಿ. ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎಚ್. ಬಿ. ಕೆಂಚಳ್ಳಿ, ಸಿ.ಎಸ್. ಕಮ್ಮಾರ, ವಿ.ಎಸ್. ರೂಳಿ, ಶಾಂತಮ್ಮ ಎಚ್. ಎಂ.ಎಂ. ಪ್ಯಾಟಿ, ಬಿ.ಸಿ. ತಿಮ್ಮೇನಹಳ್ಳಿ, ಸತೀಶ ಮಡಿವಾಳರ, ಉಮೇಶ ಎನ್.ಕೆ. ಎಂ.ಅರ್. ಅಂಚಿ , ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್.ಎಸ್. ತಾಂದಳೆ, ಯಲ್ಲಪ್ಪ ಸುರಗೀಹಳ್ಳಿ, ಕವಿತಾ ಹಿರೇಗೌಡರ, ಆಸ್ಮಾ ಆಲದಕಟ್ಟಿ, ಪರ್ವಿನಬಾನು ದೊಡ್ಡಮನಿ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>