ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕೊಲಿ, ಕಬ್ಬಲಿಗ, ಅಂಬಿಗ, ಗಂಗಾಮತ ಸಮಾಜವೆಂದು ಕರೆಸಿಕೊಳ್ಳುವ ನಮ್ಮ ಸಮುದಾಯದವರು ರಾಜ್ಯದಲ್ಲಿ 40–50 ಲಕ್ಷ ಜನಸಂಖ್ಯೆ ಹೊಂದಿದೆ. ಲೋಕಸಭೆ ಚುನಾವಣೆಗೂ ಮುನ್ನ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಮತ ಹಾಕಿಸಿಕೊಂಡು ಸಮಾಜದವರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.