<p><strong>ಹಾವೇರಿ</strong>: ‘ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಸಾಧಿಸಬೇಕಾದರೆ, ಛಲದಿಂದ ಅಧ್ಯಯನ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದಲ್ಲಿರುವ ಎಂ.ಆರ್.ಎಂ. ವಸತಿಯುತ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತನ್ನ ಕನಸನ್ನು ನನಸು ಮಾಡಲು ನಿರಂತರ ಪ್ರಯತ್ನ ಮಾಡಬೇಕು. ಮಗುವಿನ ಶಿಕ್ಷಣ ಮತ್ತು ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಎಂ.ಆರ್.ಎಂ ಶಾಲೆಯು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದರು.</p>.<p>ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ರಾಮ ಮೋಹನ ರಾವ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ದೃಢ ಸಂಕಲ್ಪ ಅತೀ ಅವಶ್ಯಕ. ಮನಸ್ಸಿನ ಏಕಾಗ್ರತೆ ಮತ್ತು ಪ್ರಯತ್ನದಿಂದ ಏನನ್ನಾದರೂ ಸಾಧಿಸಲು ಸಾಧ್ಯ. ಇದನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಹಾವೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಪ್ರಜಾ ಪ್ರಗತಿ ಟ್ರಸ್ಟ್ ನಿರ್ದೇಶಕರಾದ ಎಂ.ಎಸ್.ಗಾಂಧಿ, ಎಂ.ಆರ್.ಎಂ. ಟ್ರಸ್ಟ್ ನಿರ್ದೇಶಕ ರಾಜೀವ್ ಸಾಯಿ, ಮುಖ್ಯ ಶಿಕ್ಷಕರಾದ ಅಕ್ಷತಾ ಸುರಪುರಮಠ ಇದ್ದರು.</p>.<p>ಶಾಲೆಯ ವಿದ್ಯಾರ್ಥಿಗಳು ನೃತ್ಯ, ರೂಪಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಸಾಧಿಸಬೇಕಾದರೆ, ಛಲದಿಂದ ಅಧ್ಯಯನ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದಲ್ಲಿರುವ ಎಂ.ಆರ್.ಎಂ. ವಸತಿಯುತ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತನ್ನ ಕನಸನ್ನು ನನಸು ಮಾಡಲು ನಿರಂತರ ಪ್ರಯತ್ನ ಮಾಡಬೇಕು. ಮಗುವಿನ ಶಿಕ್ಷಣ ಮತ್ತು ಜೀವನವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಎಂ.ಆರ್.ಎಂ ಶಾಲೆಯು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದರು.</p>.<p>ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ರಾಮ ಮೋಹನ ರಾವ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ದೃಢ ಸಂಕಲ್ಪ ಅತೀ ಅವಶ್ಯಕ. ಮನಸ್ಸಿನ ಏಕಾಗ್ರತೆ ಮತ್ತು ಪ್ರಯತ್ನದಿಂದ ಏನನ್ನಾದರೂ ಸಾಧಿಸಲು ಸಾಧ್ಯ. ಇದನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಹಾವೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಪ್ರಜಾ ಪ್ರಗತಿ ಟ್ರಸ್ಟ್ ನಿರ್ದೇಶಕರಾದ ಎಂ.ಎಸ್.ಗಾಂಧಿ, ಎಂ.ಆರ್.ಎಂ. ಟ್ರಸ್ಟ್ ನಿರ್ದೇಶಕ ರಾಜೀವ್ ಸಾಯಿ, ಮುಖ್ಯ ಶಿಕ್ಷಕರಾದ ಅಕ್ಷತಾ ಸುರಪುರಮಠ ಇದ್ದರು.</p>.<p>ಶಾಲೆಯ ವಿದ್ಯಾರ್ಥಿಗಳು ನೃತ್ಯ, ರೂಪಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>