<p><strong>ಹಾವೇರಿ:</strong> ಕೋವಿಡ್ ತಡೆಗಟ್ಟಲು ಹಾವೇರಿ ನಗರದಲ್ಲಿ ಪ್ರತಿದಿನ ಬೆಳಿಗ್ಗೆ 5ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವಾಣಿಜ್ಯ ಚಟುವಟಿಕೆ ನಡೆಸಿ ಉಳಿದ ಅವಧಿಯಲ್ಲಿ ಸ್ವಯಂ ಪ್ರೇರಣೆಯಿಂದ ಬಂದ್ ಮಾಡಲು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸರ್ವಾನುಮತದ ನಿರ್ಣಯ ಕೈಗೊಂಡರು.</p>.<p>ಹಾವೇರಿ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ನಗರದ ವರ್ತಕರು ಹಾಗೂ ಲಾರಿ, ಟೆಂಪೊ, ಆಟೊ ಚಾಲಕರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಸ್ವಯಂ ಬಂದ್ ಮಾಡಲು ಕೈಗೊಂಡ ವಿವರವನ್ನು ಸಭೆಯಲ್ಲಿ ಮಂಡಿಸಿದರು.</p>.<p>ತಹಶೀಲ್ದಾರ್ ಶಂಕರ್ ಮಾತನಾಡಿ, ವಿವಿಧ ಸಂಘದವರಿಂದ ಸ್ವಯಂ ಪ್ರೇರಣೆಯಿಂದ ಲಾಕ್ಡೌನ್ಗೆ ಮುಂದಾಗಿದ್ದು ಖುಷಿ ತಂದಿದೆ. ಇದರಿಂದ ಕೋವಿಡ್ ತಡೆಯಲು ಸಹಕಾರಿಯಾಗುತ್ತದೆ. ಸ್ವಯಂ ಲಾಕ್ಡೌನ್ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ. ಎಲ್ಲರೂ ಸಹಕರಿಸಿ ಪಾಲಿಸುವಂತೆ ಮನವಿ ಮಾಡಿಕೊಂಡರು.</p>.<p>ಎಫ್.ಕೆ.ಸಿ.ಸಿ.ಐ. ಸದಸ್ಯ ಪಿ.ಡಿ. ಶಿರೂರ ಮಾತನಾಡಿದರು.ಡಿವೈಎಸ್ಪಿ ವಿಜಯಕುಮಾರ ಸಂತೋಷ,ಸಿಪಿಐ ಚಿದಾನಂದ ಮೂರ್ತಿ,ಜಿಲ್ಲಾ ವಾಣಿಜ್ಯೋದ್ಯಮಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಜಿ.ವಿ ಹಿರೇಗೌಡರ, ಉಪಾಧ್ಯಕ್ಷ ರವಿ ಮೆಣಸಿನಕಾಯಿ, ಸಬ್ಇನ್ಸ್ಪೆಕ್ಟರ್ಗಳಾದ ಜಿ.ಬಿ ನಾವಿ, ಬಿ.ಎ ಬೇಟಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಕೋವಿಡ್ ತಡೆಗಟ್ಟಲು ಹಾವೇರಿ ನಗರದಲ್ಲಿ ಪ್ರತಿದಿನ ಬೆಳಿಗ್ಗೆ 5ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವಾಣಿಜ್ಯ ಚಟುವಟಿಕೆ ನಡೆಸಿ ಉಳಿದ ಅವಧಿಯಲ್ಲಿ ಸ್ವಯಂ ಪ್ರೇರಣೆಯಿಂದ ಬಂದ್ ಮಾಡಲು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸರ್ವಾನುಮತದ ನಿರ್ಣಯ ಕೈಗೊಂಡರು.</p>.<p>ಹಾವೇರಿ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ನಗರದ ವರ್ತಕರು ಹಾಗೂ ಲಾರಿ, ಟೆಂಪೊ, ಆಟೊ ಚಾಲಕರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಸ್ವಯಂ ಬಂದ್ ಮಾಡಲು ಕೈಗೊಂಡ ವಿವರವನ್ನು ಸಭೆಯಲ್ಲಿ ಮಂಡಿಸಿದರು.</p>.<p>ತಹಶೀಲ್ದಾರ್ ಶಂಕರ್ ಮಾತನಾಡಿ, ವಿವಿಧ ಸಂಘದವರಿಂದ ಸ್ವಯಂ ಪ್ರೇರಣೆಯಿಂದ ಲಾಕ್ಡೌನ್ಗೆ ಮುಂದಾಗಿದ್ದು ಖುಷಿ ತಂದಿದೆ. ಇದರಿಂದ ಕೋವಿಡ್ ತಡೆಯಲು ಸಹಕಾರಿಯಾಗುತ್ತದೆ. ಸ್ವಯಂ ಲಾಕ್ಡೌನ್ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ. ಎಲ್ಲರೂ ಸಹಕರಿಸಿ ಪಾಲಿಸುವಂತೆ ಮನವಿ ಮಾಡಿಕೊಂಡರು.</p>.<p>ಎಫ್.ಕೆ.ಸಿ.ಸಿ.ಐ. ಸದಸ್ಯ ಪಿ.ಡಿ. ಶಿರೂರ ಮಾತನಾಡಿದರು.ಡಿವೈಎಸ್ಪಿ ವಿಜಯಕುಮಾರ ಸಂತೋಷ,ಸಿಪಿಐ ಚಿದಾನಂದ ಮೂರ್ತಿ,ಜಿಲ್ಲಾ ವಾಣಿಜ್ಯೋದ್ಯಮಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಜಿ.ವಿ ಹಿರೇಗೌಡರ, ಉಪಾಧ್ಯಕ್ಷ ರವಿ ಮೆಣಸಿನಕಾಯಿ, ಸಬ್ಇನ್ಸ್ಪೆಕ್ಟರ್ಗಳಾದ ಜಿ.ಬಿ ನಾವಿ, ಬಿ.ಎ ಬೇಟಗೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>