ಜಿಲ್ಲೆಯಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅರ್ಹರಿಗೆ ನೀಡಬೇಕಾದ ಪರಿಹಾರ ಅನರ್ಹರ ಪಾಲಾಗಿದೆ ಎಂಬ ಗಂಭೀರ ಆರೋಪಗಳನ್ನು ಫಲಾನುಭವಿಗಳು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತನಿಖೆಯ ಹೊಣೆಯನ್ನು ಪೊಲೀಸರಿಗೆ ಒಪ್ಪಿಸಿದೆ. ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಏಳು ಗ್ರಾಮ ಲೆಕ್ಕಾಧಿಕಾರಿಗಳು ಅಮಾನತುಗೊಂಡಿದ್ದಾರೆ.