ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮಾತನಾಡಿ, 48 ವರ್ಷಗಳಿಂದ ಐಸಿಡಿಎಸ್ ಯೋಜನೆಯಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಾತ್ಕಾಲಿಕ ಆದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮತ್ತು ಗೌರವಧನ ಬದಲಾಗಿ ವೇತನ ಮತ್ತು ಮಹಿಳಾ ಕಾರ್ಮಿಕರೆಂದು ಆದೇಶ ಕೊಡಬೇಕು. ಬೇರೆ ಇಲಾಖೆಗಳಿಂದ ಆರಂಭಿಸುತ್ತಿರುವ ಶಿಶುಪಾಲನಾ ಕೇಂದ್ರಗಳು, ಮತ್ತು ಶಾಲಾ ಪೂರ್ವ ಶಿಕ್ಷಣ ತರಗತಿಗಳಿಗೆ ಖರ್ಚು ಮಾಡುವ ಅನುದಾನವನ್ನು ಅಂಗನವಾಡಿ ಕೇಂದ್ರಗಳಿಗೆ ಬಿಡುಗಡೆ ಮಾಡಿ ಅಂಗನವಾಡಿ ಕೇಂದ್ರಗಳಲಿಯೇ ಎಲ್ಕೆಜಿ ಆರಂಭಿಸಬೇಕು ಎಂದು ಆಗ್ರಹಿಸಿದರು.