<p><strong>ರಟ್ಟೀಹಳ್ಳಿ</strong>: ಹಿರೇಕೆರೂರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿ ಕಾಮಗಾರಿಗೆ ₹1 ಕೋಟಿ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಅನುದಾನ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ (ಎಸ್.ಸಿ.) ಮಾದಿಗ ಜನಾಂಗವನ್ನು ಶಾಸಕರು ಕಡೆಗಣಿಸಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡಕರ ವಾದ) ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಎಂ.ಎಂ. ಆರೋಪಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪ್ರತಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಚಿಕ್ಕಯಡಚಿ, ಬನ್ನಿಹಟ್ಟಿ, ಬಾವಾಪುರ ಗ್ರಾಮಗಳ ಕಾಲೊನಿಗೆ ₹10 ಲಕ್ಷ ಗಳಂತೆ ಅನುದಾನ ಹಂಚಿಕೆ ಮಾಡಲಾಗಿದೆ. ಆದರೆ, ತಾಲ್ಲೂಕಿನಲ್ಲಿರುವ ಬಹುಸಂಖ್ಯಾತ ಎಸ್.ಸಿ. ಮಾದಿಗ ಜನಾಂಗ ವಾಸವಿರುವ ಗ್ರಾಮಗಳಲ್ಲಿ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಶಾಸಕರ ಈ ಧೋರಣೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಖಂಡಿಸುತ್ತದೆ. ಶಾಸಕರು ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಮಾದಿಗ ಜನಾಂಗ ವಾಸವಿರುವ ಗ್ರಾಮಗಳ ಅಭಿವೃದ್ಧಿಗೆ ಅನುದಾನ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಮಾಧಿಗ ಸಮಾಜ ಹಿರಿಯ ಮುಖಂಡ ಹನುಮಂತಪ್ಪ ಗಾಜೇರ ಮಾತನಾಡಿದರು. ಮುಖಂಡರಾದ ಕುಮಾರ ದ್ಯಾವಣ್ಣನವರ, ನಾಗರಾಜ ನಡುವಿನಮನಿ ಸಂತೋಷ ಹೊಸಳ್ಳಿ, ಮಾಂತೇಶ ಬಕ್ಕೂರ, ರಮೇಶ ಸೊರಟೂರ, ಗಣೇಶ ಕುಂಚೂರು, ಅಣ್ಣಪ್ಪ ನಡುವಿನಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ</strong>: ಹಿರೇಕೆರೂರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿ ಕಾಮಗಾರಿಗೆ ₹1 ಕೋಟಿ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಅನುದಾನ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ (ಎಸ್.ಸಿ.) ಮಾದಿಗ ಜನಾಂಗವನ್ನು ಶಾಸಕರು ಕಡೆಗಣಿಸಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡಕರ ವಾದ) ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಎಂ.ಎಂ. ಆರೋಪಿಸಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪ್ರತಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಚಿಕ್ಕಯಡಚಿ, ಬನ್ನಿಹಟ್ಟಿ, ಬಾವಾಪುರ ಗ್ರಾಮಗಳ ಕಾಲೊನಿಗೆ ₹10 ಲಕ್ಷ ಗಳಂತೆ ಅನುದಾನ ಹಂಚಿಕೆ ಮಾಡಲಾಗಿದೆ. ಆದರೆ, ತಾಲ್ಲೂಕಿನಲ್ಲಿರುವ ಬಹುಸಂಖ್ಯಾತ ಎಸ್.ಸಿ. ಮಾದಿಗ ಜನಾಂಗ ವಾಸವಿರುವ ಗ್ರಾಮಗಳಲ್ಲಿ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಶಾಸಕರ ಈ ಧೋರಣೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ಖಂಡಿಸುತ್ತದೆ. ಶಾಸಕರು ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಮಾದಿಗ ಜನಾಂಗ ವಾಸವಿರುವ ಗ್ರಾಮಗಳ ಅಭಿವೃದ್ಧಿಗೆ ಅನುದಾನ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಮಾಧಿಗ ಸಮಾಜ ಹಿರಿಯ ಮುಖಂಡ ಹನುಮಂತಪ್ಪ ಗಾಜೇರ ಮಾತನಾಡಿದರು. ಮುಖಂಡರಾದ ಕುಮಾರ ದ್ಯಾವಣ್ಣನವರ, ನಾಗರಾಜ ನಡುವಿನಮನಿ ಸಂತೋಷ ಹೊಸಳ್ಳಿ, ಮಾಂತೇಶ ಬಕ್ಕೂರ, ರಮೇಶ ಸೊರಟೂರ, ಗಣೇಶ ಕುಂಚೂರು, ಅಣ್ಣಪ್ಪ ನಡುವಿನಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>