ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 25ರಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮಳೆ ನೀರು ಸೋರಿಕೆಯಿಂದ ಮಕ್ಕಳು, ಗರ್ಭಿಣಿ, ಬಾಣಂತಿಯರು, ರೋಗಿಗಳು ತೀವ್ರ ಪರದಾಡುತ್ತಿದ್ದನ್ನು ಕಂಡು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಆರೋಗ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮಂಜುನಾಥ ನಾಯಕ್ ಅವರನ್ನು ಅಮಾನತುಗೊಳಿಸಿದ್ದರು.