ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ಬೇಬಿರಾಣಿ ಮೌರ್ಯ ಅವರು ಕತ್ತಲಾದ ಮೇಲೆ ಯಾವುದೇ ಹೆಣ್ಣುಮಕ್ಕಳು ಒಂಟಿಯಾಗಿ ಪೊಲೀಸ್ ಠಾಣೆಗೆ ಹೋಗಬಾರದು. ಹೋಗಬೇಕಾದ ಸ್ಥಿತಿ ಬಂದರೆ ಅಣ್ಣ, ಅಪ್ಪ, ಪತಿ ಯಾರನ್ನಾದರೂ ಜತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಪ್ರಧಾನಿ ಪ್ರತಿನಿಧಿಸುವ ಕ್ಷೇತ್ರ ವಾರಾಣಸಿಯಲ್ಲಿ ಹೇಳಿದ್ದಾರೆ. ಈ ದೇಶ ಹಾಗೂ ರಾಜ್ಯದಲ್ಲಿ ಯಾವ ರೀತಿ ಮಹಿಳೆಯರಿಗೆ ರಕ್ಷಣೆ ಸಿಗುತ್ತಿದೆ ಎಂದು ನಾವು ನೋಡುತ್ತಿದ್ದು, ಈ ವಿಚಾರ ಗಂಭೀರವಾಗಿ ಪರಿಗಣಿಸುವಂತೆ ಮಹಿಳೆಯರಲ್ಲಿ ಮನವಿ ಮಾಡುತ್ತೇನೆ. ದೇಶದ ಎಲ್ಲ ಮಹಿಳೆಯರು ಧ್ವನಿ ಎತ್ತಿ ಹೋರಾಡಬೇಕು. ಬಿಜೆಪಿ ವಿರುದ್ಧ ಮತ ಹಾಕಿ, ತಮ್ಮ ಸುರಕ್ಷತೆಯತ್ತ ಗಮನ ಹರಿಸಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.