ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಅಂದು ಕಾಗಿನೆಲೆ ಕ್ರಾಸ್ನಿಂದ ಪ್ರತಿಭಟನಾ ಜಾಥಾದ ಮುಖಾಂತರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಸಮಸ್ತ ರೈತರು, ಕೃಷಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತ ಮಹಿಳೆಯರು, ವಿವಿಧ ಸಂಘಟನೆಗಳು ಭಾಗವಹಿಸಬೇಕು ಎಂದು ವಿನಂತಿ ಮಾಡಿದರು.