‘ಹಿಂದೆ, ಮನೆಯಲ್ಲಿ ಹಿರಿಯರ ಮಾತುಗಳೇ ವೇದವಾಕ್ಯಗಳಾಗಿದ್ದವು. ಆದರೆ, ಇಂದು ತಿರಸ್ಕಾರ ಭಾವದಿಂದ ಕಾಣಲಾಗುತ್ತಿದೆ. ಬದಲಾದ ಕಾಲದಲ್ಲಿ ವಯೋವೃದ್ಧರಲ್ಲಿ ವಯೋಸಹಜ ಸಂಬಂಧಿ ಸಮಸ್ಯೆಗಳು, ಮಾನಸಿಕ ಸಮಸ್ಯೆಗಳು ಹೆಚ್ಚು ಕಾಡುತ್ತವೆ. ಇಂತಹ ಸಂದರ್ಭದಲ್ಲಿ ಮನೆಯ ಕುಟುಂಬದ ಸಹ ಸದಸ್ಯರ ನೆರವು, ಬೆಂಬಲ, ಗೌರವ ನೀಡುವ ಮೂಲಕ ನೆಮ್ಮದಿಯ ಜೀವನಕ್ಕೆ ನಾವೆಲ್ಲ ಜೊತೆಯಾಗಬೇಕು. ಹಿರಿಯರನ್ನು ಕಡೆಗಣಿಸಿ ವೃದ್ಧಾಶ್ರಮಗಳಿಗೆ ಮೊರೆ ಹೋಗುವಂತೆ ನಡೆದುಕೊಳ್ಳಬಾರದು’ ಎಂದು ಸಲಹೆ ನೀಡಿದರು.