<p><strong>ಹಾವೇರಿ:</strong> ‘ರಾಜ್ಯದ ವಾಸ್ತವ ಸ್ಥಿತಿ ಅರಿತುಕೊಳ್ಳದೆ, ಎಲ್ಲ ಸಮುದಾಯದವರು ತಮ್ಮವರಿಗೆ ಮಂತ್ರಿ ಸ್ಥಾನ ನೀಡಿ ಎಂದು ಒತ್ತಡ ಹಾಕಿದರೆ ಅದನ್ನು ಕಾರ್ಯರೂಪಕ್ಕೆ ತರುವುದು ಕಷ್ಟವಾಗುತ್ತದೆ’ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ತಾಲ್ಲೂಕಿನ ನರಸೀಪರದಲ್ಲಿ ಬುಧವಾರ ಏರ್ಪಡಿಸಿದ್ದ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿ, ‘ಹರಜಾತ್ರೆ’ಯಲ್ಲಿ ನಡೆದಂಥ ಘಟನೆಗಳನ್ನು ಎದುರಿಸುವುದು ನಮಗೆ ಅನಿವಾರ್ಯ. ದಿಂಗಾಲೇಶ್ವರ ಶ್ರೀ, ನಿಡುಮಾಮಿಡಿ ಶ್ರೀ ಈ ಘಟನೆಯ ಬಗ್ಗೆ ನೊಂದುಕೊಂಡು ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಯಾವುದೇ ಸಮುದಾಯಕ್ಕೆ ನೋವಾಗದ ರೀತಿಯಲ್ಲಿ ಮುಂದಿನ 3 ವರ್ಷ ಅಭಿವೃದ್ಧಿಪರವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.</p>.<p>18 ಶಾಸಕರು ರಾಜೀನಾಮೆ ನೀಡಿ, 6 ತಿಂಗಳು ವನವಾಸ ಅನುಭವಿಸಿದರು. ಅವರ ನೆರವಿನಿಂದ ನಾನು ಮುಖ್ಯಮಂತ್ರಿಯಾಗಿದ್ದೇನೆ. ಅವರಲ್ಲಿ 15ರಿಂದ 16 ಜನರನ್ನು ಮಂತ್ರಿ ಮಾಡಬೇಕಿದೆ. ಇಂಥ ಸಂದರ್ಭದಲ್ಲಿ ಸಮುದಾಯದವರು ‘ಮಂತ್ರಿ ಸ್ಥಾನ’ಕ್ಕೆ ಬೇಡಿಕೆ ಇಟ್ಟರೆ ಕಷ್ಟವಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.</p>.<p><strong>₹ 10 ಕೋಟಿ ಭರವಸೆ:</strong>ಮುಂದಿನ ಬಜೆಟ್ನಲ್ಲಿ ನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ₹ 10 ಕೋಟಿ ಮೀಸಲಿಡುತ್ತೇನೆ. ಈಗಾಗಲೇ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ಬಾಬುರಾವ್ ಚಿಂಚನಸೂರ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾ ಜತೆ ಮಾತನಾಡಿ, ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ) ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ರಾಜ್ಯದ ವಾಸ್ತವ ಸ್ಥಿತಿ ಅರಿತುಕೊಳ್ಳದೆ, ಎಲ್ಲ ಸಮುದಾಯದವರು ತಮ್ಮವರಿಗೆ ಮಂತ್ರಿ ಸ್ಥಾನ ನೀಡಿ ಎಂದು ಒತ್ತಡ ಹಾಕಿದರೆ ಅದನ್ನು ಕಾರ್ಯರೂಪಕ್ಕೆ ತರುವುದು ಕಷ್ಟವಾಗುತ್ತದೆ’ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ತಾಲ್ಲೂಕಿನ ನರಸೀಪರದಲ್ಲಿ ಬುಧವಾರ ಏರ್ಪಡಿಸಿದ್ದ ಅಂಬಿಗರ ಚೌಡಯ್ಯ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿ, ‘ಹರಜಾತ್ರೆ’ಯಲ್ಲಿ ನಡೆದಂಥ ಘಟನೆಗಳನ್ನು ಎದುರಿಸುವುದು ನಮಗೆ ಅನಿವಾರ್ಯ. ದಿಂಗಾಲೇಶ್ವರ ಶ್ರೀ, ನಿಡುಮಾಮಿಡಿ ಶ್ರೀ ಈ ಘಟನೆಯ ಬಗ್ಗೆ ನೊಂದುಕೊಂಡು ನನ್ನ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ಯಾವುದೇ ಸಮುದಾಯಕ್ಕೆ ನೋವಾಗದ ರೀತಿಯಲ್ಲಿ ಮುಂದಿನ 3 ವರ್ಷ ಅಭಿವೃದ್ಧಿಪರವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.</p>.<p>18 ಶಾಸಕರು ರಾಜೀನಾಮೆ ನೀಡಿ, 6 ತಿಂಗಳು ವನವಾಸ ಅನುಭವಿಸಿದರು. ಅವರ ನೆರವಿನಿಂದ ನಾನು ಮುಖ್ಯಮಂತ್ರಿಯಾಗಿದ್ದೇನೆ. ಅವರಲ್ಲಿ 15ರಿಂದ 16 ಜನರನ್ನು ಮಂತ್ರಿ ಮಾಡಬೇಕಿದೆ. ಇಂಥ ಸಂದರ್ಭದಲ್ಲಿ ಸಮುದಾಯದವರು ‘ಮಂತ್ರಿ ಸ್ಥಾನ’ಕ್ಕೆ ಬೇಡಿಕೆ ಇಟ್ಟರೆ ಕಷ್ಟವಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.</p>.<p><strong>₹ 10 ಕೋಟಿ ಭರವಸೆ:</strong>ಮುಂದಿನ ಬಜೆಟ್ನಲ್ಲಿ ನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ₹ 10 ಕೋಟಿ ಮೀಸಲಿಡುತ್ತೇನೆ. ಈಗಾಗಲೇ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ಬಾಬುರಾವ್ ಚಿಂಚನಸೂರ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾ ಜತೆ ಮಾತನಾಡಿ, ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ) ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>