ಬೆಂಗಳೂರಿನ ಕರ್ನಾಟಕ ಬೀದಿ ನಾಟಕ ಅಕಾಡೆಮಿ, ಕರ್ನಾಟಕ ರಂಗ ಪರಿಷತ್ತು ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಸ್ಥಳೀಯ ಜಿಲ್ಲಾ ಕಲಾಬಳಗ ಇದನ್ನು ಐದು ವರ್ಷಗಳಿಂದ ನಡೆಸುತ್ತಾ ಬಂದಿದೆ. ಕೊಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಜಿ.ಎಂ. ಓಂಕಾರಣ್ಣನವರ 20 ವರ್ಷಗಳಿಂದ ನಾಟಕ ರಚನೆಯಲ್ಲಿ ತೊಡಗಿದ್ದು, ಈವರೆಗೆ 27 ನಾಟಕಗಳನ್ನು ಬರೆದು ಪ್ರಕಟಿಸಿದ್ದಾರೆ.