<p>ಹಾವೇರಿ: ಆಟ–ಪಾಠದಲ್ಲಿ ನಲಿಯಬೇಕಾದ ಎಳೆಯ ವಯಸ್ಸಿನ ಮಕ್ಕಳು, ದುಡಿಮೆಯ ನೊಗವನ್ನು ಹೊತ್ತು ಶೋಷಣೆಗೆ ಒಳಗಾಗುವ ಸಂಕಷ್ಟವನ್ನು ‘ನಮಗೂ ಬದುಕುವ ಹಕ್ಕಿದೆ’ ನಾಟಕ ತೆರೆದಿಟ್ಟಿತು.</p>.<p>ನಗರದ ಗೆಳೆಯರ ಬಳಗದ ಜ್ಞಾನಗಂಗಾ ಶಿಕ್ಷಣ ಸಮಿತಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ‘ನಮಗೂ ಬದುಕುವ ಹಕ್ಕಿದೆ’ ನಾಟಕ ಪ್ರದರ್ಶನಗೊಂಡಿತು.</p>.<p>ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಬಾಲ ಕಾರ್ಮಿಕರಾಗುವ ಎಳೆಯ ಮನಸ್ಸುಗಳಿಗೆ ಶಿಕ್ಷಣ ನೀಡಿ ಸುಧಾರಿಸುವ ಅಗತ್ಯವಿದೆ’ ಎಂದರು.</p>.<p>ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳಾದ ಪ್ರೊ.ಕೆ.ಎಸ್. ಶಮಂತಕುಮಾರ, ಡಾ.ಶಿವಾನಂದ ಪಾಯಮಲ್ಲೆ ಇದ್ದರು.</p>.<p>ಗೆಳೆಯರ ಬಳಗದ ಮುಖ್ಯ ಶಿಕ್ಷಕಿ ಉಮಾ ಎ.ಹೊರಡಿ ಅಧ್ಯಕ್ಷತೆ ವಹಿಸಿದ್ದರು. ವಿಶಾಲಾಕ್ಷಿ ಕಿತ್ತೂರಮಠ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಆಟ–ಪಾಠದಲ್ಲಿ ನಲಿಯಬೇಕಾದ ಎಳೆಯ ವಯಸ್ಸಿನ ಮಕ್ಕಳು, ದುಡಿಮೆಯ ನೊಗವನ್ನು ಹೊತ್ತು ಶೋಷಣೆಗೆ ಒಳಗಾಗುವ ಸಂಕಷ್ಟವನ್ನು ‘ನಮಗೂ ಬದುಕುವ ಹಕ್ಕಿದೆ’ ನಾಟಕ ತೆರೆದಿಟ್ಟಿತು.</p>.<p>ನಗರದ ಗೆಳೆಯರ ಬಳಗದ ಜ್ಞಾನಗಂಗಾ ಶಿಕ್ಷಣ ಸಮಿತಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ‘ನಮಗೂ ಬದುಕುವ ಹಕ್ಕಿದೆ’ ನಾಟಕ ಪ್ರದರ್ಶನಗೊಂಡಿತು.</p>.<p>ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಬಾಲ ಕಾರ್ಮಿಕರಾಗುವ ಎಳೆಯ ಮನಸ್ಸುಗಳಿಗೆ ಶಿಕ್ಷಣ ನೀಡಿ ಸುಧಾರಿಸುವ ಅಗತ್ಯವಿದೆ’ ಎಂದರು.</p>.<p>ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳಾದ ಪ್ರೊ.ಕೆ.ಎಸ್. ಶಮಂತಕುಮಾರ, ಡಾ.ಶಿವಾನಂದ ಪಾಯಮಲ್ಲೆ ಇದ್ದರು.</p>.<p>ಗೆಳೆಯರ ಬಳಗದ ಮುಖ್ಯ ಶಿಕ್ಷಕಿ ಉಮಾ ಎ.ಹೊರಡಿ ಅಧ್ಯಕ್ಷತೆ ವಹಿಸಿದ್ದರು. ವಿಶಾಲಾಕ್ಷಿ ಕಿತ್ತೂರಮಠ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>