ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಮಾತನಾಡಿ, ‘ಜಿಲ್ಲೆಯ ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹಿರೇಕೆರೂರು, ರಟ್ಟಿಹಳ್ಳಿ, ಹಾನಗಲ್, ಶಿಗ್ಗಾವಿ ಹಾಗೂ ಸವಣೂರ ತಾಲ್ಲೂಕಿನಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಡಿ.21ರಂದು ಸವಣೂರ ತಾಲ್ಲೂಕಿನಲ್ಲಿ ಕಾರ್ಯಾಗಾರ ಮುಕ್ತಾಯಗೊಳ್ಳಲಿದೆ. ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.