<p><strong>ಹಾವೇರಿ: </strong>‘ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ’ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.</p>.<p>ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ. ಮೂರು ದಿನಗಳ ಈ ಕ್ರೀಡಾಕೂಟದಲ್ಲಿ ಅತ್ಯಂತ ಉತ್ಸಾಹ ಹಾಗೂ ಸಂತೋಷದಿಂದ ಭಾಗವಹಿಸಿ ಎಂದು ಶುಭ ಕೋರಿದರು.</p>.<p class="Subhead"><strong>ಆಕರ್ಷಕ ಪಥಸಂಚಲನ:</strong></p>.<p>ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾವೇರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ರಾಣೆಬೆನ್ನೂರು, ಶಿಗ್ಗಾವಿ ಉಪವಿಭಾಗಗಳ ತಂಡ ಹಾಗೂ ಮಹಿಳಾ ಪೊಲೀಸ್ ಕ್ರೀಡಾ ತಂಡಗಳು ಕೇಸರಿ, ಕೆಂಪು, ಹಳದಿ, ಹಸಿರು ಹಾಗೂ ಆಕಾಶ ನೀಲಿ ಬಣ್ಣದ ಟೀ ಶರ್ಟ್ ಧರಿಸಿ ಪಥಸಂಚಲನ ನಡೆಸಿದರು.</p>.<p>ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವೆಂಕಟರಾಜು ನಾಯಕ್, ನಾಗರಿಕ ಪೊಲೀಸ್ ಉಪ ವಿಭಾಗದ ಪ್ರವೀಣಕುಮಾರ, ರಾಣೇಬೆನ್ನೂರ ಉಪವಿಭಾಗದಿಂದ ಪಿ.ಎಸ್.ಐ.ಬಾಳಪ್ಪ , ಮಹಿಳಾ ಪೊಲೀಸ್ನ ಸುಜಾತಾ ಪಾಟೀಲ, ಶಿಗ್ಗಾವಿ ಉಪ ವಿಭಾಗದ ರಘು ನಾಯಕ ಅವರ ನೇತೃತ್ವದಲ್ಲಿ ನಡೆದ ಪಥಸಂಚಲನ ಅತ್ಯಂತ ಆಕರ್ಷಕವಾಗಿತ್ತು. ಶಂಕರಗೌಡ ಪಾಟೀಲ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.</p>.<p class="Subhead"><strong>ಕ್ರೀಡಾಜ್ಯೋತಿ:</strong></p>.<p>ಕ್ರೀಡಾಕೂಟದ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ಬೆಳಗಿಸಿದರು. ಕಳೆದ ಆರು ವರ್ಷಗಳಿಂದ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪುರಸ್ಕೃತ ಪೊಲೀಸ್ ಕ್ರೀಡಾಪಟು ಸಂತೋಷ ನಾಯಕ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.</p>.<p>ಉಪವಿಭಾಗಾಧಿಕಾರಿ ಶಿವಾನಂದ ಉಳ್ಳೆಗಡ್ಡಿ ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>‘ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ’ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.</p>.<p>ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ. ಮೂರು ದಿನಗಳ ಈ ಕ್ರೀಡಾಕೂಟದಲ್ಲಿ ಅತ್ಯಂತ ಉತ್ಸಾಹ ಹಾಗೂ ಸಂತೋಷದಿಂದ ಭಾಗವಹಿಸಿ ಎಂದು ಶುಭ ಕೋರಿದರು.</p>.<p class="Subhead"><strong>ಆಕರ್ಷಕ ಪಥಸಂಚಲನ:</strong></p>.<p>ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾವೇರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ರಾಣೆಬೆನ್ನೂರು, ಶಿಗ್ಗಾವಿ ಉಪವಿಭಾಗಗಳ ತಂಡ ಹಾಗೂ ಮಹಿಳಾ ಪೊಲೀಸ್ ಕ್ರೀಡಾ ತಂಡಗಳು ಕೇಸರಿ, ಕೆಂಪು, ಹಳದಿ, ಹಸಿರು ಹಾಗೂ ಆಕಾಶ ನೀಲಿ ಬಣ್ಣದ ಟೀ ಶರ್ಟ್ ಧರಿಸಿ ಪಥಸಂಚಲನ ನಡೆಸಿದರು.</p>.<p>ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವೆಂಕಟರಾಜು ನಾಯಕ್, ನಾಗರಿಕ ಪೊಲೀಸ್ ಉಪ ವಿಭಾಗದ ಪ್ರವೀಣಕುಮಾರ, ರಾಣೇಬೆನ್ನೂರ ಉಪವಿಭಾಗದಿಂದ ಪಿ.ಎಸ್.ಐ.ಬಾಳಪ್ಪ , ಮಹಿಳಾ ಪೊಲೀಸ್ನ ಸುಜಾತಾ ಪಾಟೀಲ, ಶಿಗ್ಗಾವಿ ಉಪ ವಿಭಾಗದ ರಘು ನಾಯಕ ಅವರ ನೇತೃತ್ವದಲ್ಲಿ ನಡೆದ ಪಥಸಂಚಲನ ಅತ್ಯಂತ ಆಕರ್ಷಕವಾಗಿತ್ತು. ಶಂಕರಗೌಡ ಪಾಟೀಲ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು.</p>.<p class="Subhead"><strong>ಕ್ರೀಡಾಜ್ಯೋತಿ:</strong></p>.<p>ಕ್ರೀಡಾಕೂಟದ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರು ಬೆಳಗಿಸಿದರು. ಕಳೆದ ಆರು ವರ್ಷಗಳಿಂದ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪುರಸ್ಕೃತ ಪೊಲೀಸ್ ಕ್ರೀಡಾಪಟು ಸಂತೋಷ ನಾಯಕ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು.</p>.<p>ಉಪವಿಭಾಗಾಧಿಕಾರಿ ಶಿವಾನಂದ ಉಳ್ಳೆಗಡ್ಡಿ ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ.ಸಂತೋಷ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>