<p><strong>ಹಾವೇರಿ: </strong>ಮಹಿಳೆಯರು ವಾಹನ ಚಾಲನೆ ತರಬೇತಿ ಪಡೆದು ಘನತ್ಯಾಜ್ಯ ಕಸ ವಿಲೇವಾರಿ ವಾಹನಗಳ ಚಾಲಕರಾಗಿ ಕಾರ್ಯನಿರ್ವಹಿಸುವುದರ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿಸಿಇಒ ಮೊಹಮ್ಮದ್ ರೋಶನ್ ಕರೆ ನೀಡಿದರು.</p>.<p>ದೇವಗಿರಿಯಲ್ಲಿರುವ ಬರೊಡಾ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಘನತ್ಯಾಜ್ಯ ಕಸ ವಿಲೇವಾರಿ ವಾಹನ ಚಾಲನೆ ಮಾಡುವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ವಿನೂತನವಾದ ಪ್ರಯೋಗವನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದ ಘನತ್ಯಾಜ್ಯ ಕಸ ವಿಲೇವಾರಿ ವಾಹನಗಳ ಚಾಲನೆಗೆ ಮಹಿಳೆಯರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಪ್ರಥಮ ಬಾರಿಗೆ ಘನತ್ಯಾಜ್ಯ ಕಸ ವಿಲೇವಾರಿ ಕಾರ್ಯ ಕೈಗೊಳ್ಳಲು 30 ದಿನಗಳ ಲಘು ವಾಹನ ತರಬೇತಿಯನ್ನು ಬರೊಡಾ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಕೇಂದ್ರದಿಂದ ಆಯೋಜಿಸಲಾಗಿದೆ ಎಂದರು.</p>.<p>ಮಹಿಳೆಯರು ವಾಹನ ಚಾಲನಾ ತರಬೇತಿಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು. ಮಹಿಳಾ ಚಾಲಕರಾಗಿ ವಾಹನ ಚಾಲನೆ ಜೊತೆಗೆ ಗ್ರಾಮೀಣ ಸ್ವಚ್ಛತೆಯ ಕಾರ್ಯಕ್ಕೆ ಕೈಜೋಡಿಸಬೇಕು. ಈ ಕೆಲಸದಿಂದ ತಾವು ಆರ್ಥಿಕವಾಗಿ ಸಬಲರಾಗಬಹುದು. ಸಮಾಜದಲ್ಲಿ ಗೌರವಯುತವಾದ ಜೀವನ ನಡೆಸಬಹುದು. ಮಹಿಳೆಯರು ಪ್ರತಿ ಹಂತದಲ್ಲೂ ಧೈರ್ಯದಿಂದ ಮುನ್ನಡೆದರೆ ನಿಶ್ಚಿತವಾಗಿಯೂ ಯಶಸ್ಸು ಹೊಂದಲು ಸಾಧ್ಯ ಎಂದು ಹೇಳಿದರು.</p>.<p>ವೆಬ್ಸಿಟಿ ತರಬೇತಿ ಸಂಸ್ಥೆಯ ನಿರ್ದೇಶಕ ಎಸ್.ಸಜೀತ್, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಜೆ. ಕೊರವರ, ಪರಶುರಾಮ ಪೂಜಾರ, ಜಿಲ್ಲಾ ಯೋಜನಾ ನಿರ್ದೇಶಕ ನಾಗರಾಜ ಬಾರ್ಕಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಮಹಿಳೆಯರು ವಾಹನ ಚಾಲನೆ ತರಬೇತಿ ಪಡೆದು ಘನತ್ಯಾಜ್ಯ ಕಸ ವಿಲೇವಾರಿ ವಾಹನಗಳ ಚಾಲಕರಾಗಿ ಕಾರ್ಯನಿರ್ವಹಿಸುವುದರ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿಸಿಇಒ ಮೊಹಮ್ಮದ್ ರೋಶನ್ ಕರೆ ನೀಡಿದರು.</p>.<p>ದೇವಗಿರಿಯಲ್ಲಿರುವ ಬರೊಡಾ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಘನತ್ಯಾಜ್ಯ ಕಸ ವಿಲೇವಾರಿ ವಾಹನ ಚಾಲನೆ ಮಾಡುವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ವಿನೂತನವಾದ ಪ್ರಯೋಗವನ್ನು ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದ ಘನತ್ಯಾಜ್ಯ ಕಸ ವಿಲೇವಾರಿ ವಾಹನಗಳ ಚಾಲನೆಗೆ ಮಹಿಳೆಯರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಪ್ರಥಮ ಬಾರಿಗೆ ಘನತ್ಯಾಜ್ಯ ಕಸ ವಿಲೇವಾರಿ ಕಾರ್ಯ ಕೈಗೊಳ್ಳಲು 30 ದಿನಗಳ ಲಘು ವಾಹನ ತರಬೇತಿಯನ್ನು ಬರೊಡಾ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಕೇಂದ್ರದಿಂದ ಆಯೋಜಿಸಲಾಗಿದೆ ಎಂದರು.</p>.<p>ಮಹಿಳೆಯರು ವಾಹನ ಚಾಲನಾ ತರಬೇತಿಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು. ಮಹಿಳಾ ಚಾಲಕರಾಗಿ ವಾಹನ ಚಾಲನೆ ಜೊತೆಗೆ ಗ್ರಾಮೀಣ ಸ್ವಚ್ಛತೆಯ ಕಾರ್ಯಕ್ಕೆ ಕೈಜೋಡಿಸಬೇಕು. ಈ ಕೆಲಸದಿಂದ ತಾವು ಆರ್ಥಿಕವಾಗಿ ಸಬಲರಾಗಬಹುದು. ಸಮಾಜದಲ್ಲಿ ಗೌರವಯುತವಾದ ಜೀವನ ನಡೆಸಬಹುದು. ಮಹಿಳೆಯರು ಪ್ರತಿ ಹಂತದಲ್ಲೂ ಧೈರ್ಯದಿಂದ ಮುನ್ನಡೆದರೆ ನಿಶ್ಚಿತವಾಗಿಯೂ ಯಶಸ್ಸು ಹೊಂದಲು ಸಾಧ್ಯ ಎಂದು ಹೇಳಿದರು.</p>.<p>ವೆಬ್ಸಿಟಿ ತರಬೇತಿ ಸಂಸ್ಥೆಯ ನಿರ್ದೇಶಕ ಎಸ್.ಸಜೀತ್, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ವಸೀಂಬಾಬಾ ಮುದ್ದೇಬಿಹಾಳ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಜೆ. ಕೊರವರ, ಪರಶುರಾಮ ಪೂಜಾರ, ಜಿಲ್ಲಾ ಯೋಜನಾ ನಿರ್ದೇಶಕ ನಾಗರಾಜ ಬಾರ್ಕಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>