ಹಾವೇರಿ: ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ಡಾ.ಸಂಜಯ ಡಾಂಗೆ ಅವರು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಡಾ.ಸಂಜಯ ಡಾಂಗೆ ಮಾತನಾಡಿ, ‘ಮತ್ತೆ ಕಾಂಗ್ರೆಸ್ಗೆ ಮರಳಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ. ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಆರ್.ಎಂ. ಕುಬೇರಪ್ಪ ಅವರನ್ನು ಬೆಂಬಲಿಸಿಲು ಮತದಾರರಲ್ಲಿ ಮನವಿ ಮಾಡುತ್ತೇನೆ. ಪಕ್ಷವನ್ನು ಕಟ್ಟಲು ಶ್ರಮಿಸುತ್ತೇನೆ ಎಂದರು.
ರಬ್ಬಾನಿ ಹುಲಗೇರಿ, ಸಾಧೀಕ ನದಾಪ, ನೂರ ಅಹ್ಮದ ಹುಲಗೇರಿ, ಮಹಮ್ಮದ್ ಗೌಸ್ ಮತ್ತಿಹಳ್ಳಿ ಇತರರು ಡಾಂಗೆ ಅವರೊಂದಿಗೆ ಕಾಂಗ್ರೆಸ್ಗೆ ಸೇರ್ಪಡೆಯಾದರು.
ಮಾಜಿ ಸಚಿವ ರುದ್ರಪ್ಪ ಲಮಾಣಿ,ಜಿಲ್ಲಾ ಪಂಚಾಯಿತಿ ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ಮುಖಂಡರಾದ ಸಿ.ಬಿ.ಕುರವತ್ತಿಗೌಡ್ರ, ಡಾ.ಎಳ್ಳಟ್ಟಿ, ಎಮ್.ಎಮ್.ಮೈದೂರ, ಪ್ರಭು ಬಿಷ್ಠನಗೌಡ್ರ, ಸೂಜಾತಪ್ಪ ಚೆನ್ನೂರ, ಶ್ರೀಧರ ದೊಡ್ಡಮನಿ, ಸತೀಶ ಈಳಿಗೇರ ಇದ್ದರು.