<p><strong>ಹಾವೇರಿ:</strong> ತಾಲ್ಲೂಕಿನ ದೇವಗಿರಿ ಸಮೀಪವಿರುವ ಜಿಲ್ಲಾಡಳಿತ ಭವನದ ಎದುರು ನಿರ್ಮಾಣಗೊಳ್ಳಬೇಕಿರುವ ‘ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ’ದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, 15 ವರ್ಷ ಕಳೆದರೂ ಈ ಯೋಜನೆ ಸಾಕಾರಗೊಂಡಿಲ್ಲ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನದ ಆವಿಷ್ಕಾರಗಳನ್ನು ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪರಿಚಯಿಸುವುದು, ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ವೈಚಾರಿಕತೆ ಬೆಳೆಸುವುದು, ಪ್ರಾಯೋಗಿಕ ಶಿಕ್ಷಣಕ್ಕೆ ಒತ್ತು ನೀಡಿ ವಿಜ್ಞಾನ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು, ಜನರಲ್ಲಿರುವ ಮೂಢನಂಬಿಕೆಗಳನ್ನು ನಿವಾರಿಸುವುದು ಈ ಕೇಂದ್ರದ ಮುಖ್ಯ ಉದ್ದೇಶವಾಗಿದೆ.</p>.<p>ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವ ದೂರದೃಷ್ಟಿಯೊಂದಿಗೆ ಹಾಗೂ ರಾಜ್ಯದಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಪ್ರಚುರಪಡಿಸಲು ರಾಜ್ಯ ಸರ್ಕಾರದ ಸಂಪೂರ್ಣ ಅನುದಾನದೊಂದಿಗೆ, ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.</p>.<p class="Subhead"><strong>10 ಕೇಂದ್ರಗಳು:</strong></p>.<p>2006ರಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ರಾಷ್ಟ್ರೀಯ ವಿಜ್ಞಾನ ವಸ್ತುಸಂಗ್ರಹಾಲಯ ಮಂಡಳಿ (ಎನ್.ಸಿ.ಎಸ್.ಎಂ) ಮೂಲಕರಾಜ್ಯದ 10 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಿಸಲು ಅನುಮೋದನೆ ನೀಡಿತ್ತು. ಆ ಹತ್ತು ಜಿಲ್ಲೆಗಳ ಪೈಕಿ ಹಾವೇರಿ ಜಿಲ್ಲೆ ಕೂಡ ಆಯ್ಕೆಯಾಗಿತ್ತು.</p>.<p>ಹಾವೇರಿ ಜಿಲ್ಲಾಡಳಿತ ಭವನದ ಎದುರು 15 ಎಕರೆ ಜಾಗ ಗುರುತಿಸಿ, ₹4 ಕೋಟಿ ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ, ಅನುದಾನದ ಕೊರತೆ ಮತ್ತು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ 2015ರವರೆಗೆ ಕಾಮಗಾರಿಯೇ ಆರಂಭವಾಗಲಿಲ್ಲ.</p>.<p class="Subhead"><strong>₹3 ಕೋಟಿ ಬಿಡುಗಡೆ:</strong></p>.<p>2016ರಲ್ಲಿ ಅಂದಿನ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರು ಮುತುವರ್ಜಿ ವಹಿಸಿ, ವಿಜ್ಞಾನ ಕೇಂದ್ರದ ಕಾಮಗಾರಿಗೆ ಚಾಲನೆ ಕೊಡಿಸಿದ್ದರು. ಅವರು ವರ್ಗಾವಣೆಯಾದ ನಂತರ ಹಾವೇರಿಗೆ ಬಂದ ಜಿಲ್ಲಾಧಿಕಾರಿಗಳು ಈ ಕೇಂದ್ರದ ಬಗ್ಗೆ ಆಸಕ್ತಿ ತೋರದ ಕಾರಣ ಕಾಮಗಾರಿ ನನೆಗುದಿಗೆ ಬಿದ್ದಿತು. ಬಿಡುಗಡೆಯಾದ ₹3 ಕೋಟಿಯಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರದವರು ₹2 ಕೋಟಿ ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಿಸಿದ್ದರೂ, ಕಾಮಗಾರಿ ಪೂರ್ಣಗೊಂಡಿಲ್ಲ.</p>.<p>ಮಂಜೂರಾಗಿದ್ದ ₹4 ಕೋಟಿ ಅನುದಾನದಲ್ಲಿ ಕಟ್ಟಡ, ಸೈನ್ಸ್ ಪಾರ್ಕ್, ವಸ್ತು ಸಂಗ್ರಹಾಲಯ, ತಾರಾಮಂಡಲ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಬೇಕಿತ್ತು. ಆದರೆ, ಇದುವರೆಗೂ ಕಟ್ಟಡ ಕೆಲಸ ಹೊರತುಪಡಿಸಿದರೆ ಬೇರೆ ಯಾವ ಕೆಲಸವೂ ನಡೆದಿಲ್ಲ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ–ಸ್ಟೆಪ್ಸ್) ಬಾಕಿ ₹1 ಕೋಟಿ ಬಿಡುಗಡೆ ಮಾಡಲು ಸಿದ್ಧವಿದ್ದರೂ, ಆ ಹಣದಲ್ಲಿ ವಿಜ್ಞಾನ ಕೇಂದ್ರ ರೂಪುಗೊಳ್ಳುವುದು ಕಷ್ಟಸಾಧ್ಯ.</p>.<p>‘ವರ್ಷಗಳು ಉರುಳಿದಂತೆ ಯೋಜನಾ ವೆಚ್ಚವೂ ಹೆಚ್ಚಾಗುತ್ತದೆ. ಹೀಗಾಗಿಯೇ ಅನುದಾನದ ಕೊರತೆಯಿಂದ ವಿಜ್ಞಾನ ಕೇಂದ್ರದ ಕೆಲಸಗಳು ನನೆಗುದಿಗೆ ಬಿದ್ದಿವೆ. ಅಗತ್ಯವಿರುವಷ್ಟು ಹಣ ಬಿಡುಗಡೆ ಮಾಡಿದರೆ, ವಿಜ್ಞಾನ ಕೇಂದ್ರ ಸಾಕಾರಗೊಳ್ಳುತ್ತದೆ’ ಎನ್ನುತ್ತಾರೆ ಹಾವೇರಿ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶ್.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯವರೇ ಆಗಿರುವುದರಿಂದ ವಿಜ್ಞಾನ ಕೇಂದ್ರಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿ, ವಿಜ್ಞಾನ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾರೆ ಎಂಬುದು ವಿಜ್ಞಾನ ಶಿಕ್ಷಕರ ನಿರೀಕ್ಷೆಯಾಗಿದೆ.</p>.<p>₹65 ಲಕ್ಷ ಬಿಡುಗಡೆ ಮಾಡಿದ್ದು, ಕೆಲಸ ಆರಂಭವಾಗುತ್ತಿದೆ. ಕಟ್ಟಡಕ್ಕೆ ₹2 ಕೋಟಿ, ಒಳಾಂಗಣ ವಿನ್ಯಾಸಕ್ಕೆ ₹5 ಕೋಟಿ ಅನುದಾನ ಬಿಡುಗಡೆಯಾಗಬೇಕಿದೆ<br />– ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ</p>.<p>ಕಾಂಪೌಂಡ್, ಗ್ಯಾಲರಿ, ಕಟ್ಟಡ ಹಾಗೂ ಇತರ ಉದ್ದೇಶಕ್ಕೆ ₹15 ಕೋಟಿ ಅನುದಾನ ಬಿಡುಗಡೆಗೆ ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಿದ್ದೇವೆ<br />– ಅಂದಾನಪ್ಪ ವಡಗೇರಿ, ಡಿಡಿಪಿಐ, ವಿಜ್ಞಾನ ಕೇಂದ್ರ ಸಮಿತಿಯ ಸದಸ್ಯ ಕಾರ್ಯದರ್ಶಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ತಾಲ್ಲೂಕಿನ ದೇವಗಿರಿ ಸಮೀಪವಿರುವ ಜಿಲ್ಲಾಡಳಿತ ಭವನದ ಎದುರು ನಿರ್ಮಾಣಗೊಳ್ಳಬೇಕಿರುವ ‘ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ’ದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, 15 ವರ್ಷ ಕಳೆದರೂ ಈ ಯೋಜನೆ ಸಾಕಾರಗೊಂಡಿಲ್ಲ.</p>.<p>ವಿಜ್ಞಾನ ಮತ್ತು ತಂತ್ರಜ್ಞಾನದ ಆವಿಷ್ಕಾರಗಳನ್ನು ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪರಿಚಯಿಸುವುದು, ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ವೈಚಾರಿಕತೆ ಬೆಳೆಸುವುದು, ಪ್ರಾಯೋಗಿಕ ಶಿಕ್ಷಣಕ್ಕೆ ಒತ್ತು ನೀಡಿ ವಿಜ್ಞಾನ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು, ಜನರಲ್ಲಿರುವ ಮೂಢನಂಬಿಕೆಗಳನ್ನು ನಿವಾರಿಸುವುದು ಈ ಕೇಂದ್ರದ ಮುಖ್ಯ ಉದ್ದೇಶವಾಗಿದೆ.</p>.<p>ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವ ದೂರದೃಷ್ಟಿಯೊಂದಿಗೆ ಹಾಗೂ ರಾಜ್ಯದಾದ್ಯಂತ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಪ್ರಚುರಪಡಿಸಲು ರಾಜ್ಯ ಸರ್ಕಾರದ ಸಂಪೂರ್ಣ ಅನುದಾನದೊಂದಿಗೆ, ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.</p>.<p class="Subhead"><strong>10 ಕೇಂದ್ರಗಳು:</strong></p>.<p>2006ರಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ರಾಷ್ಟ್ರೀಯ ವಿಜ್ಞಾನ ವಸ್ತುಸಂಗ್ರಹಾಲಯ ಮಂಡಳಿ (ಎನ್.ಸಿ.ಎಸ್.ಎಂ) ಮೂಲಕರಾಜ್ಯದ 10 ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಿಸಲು ಅನುಮೋದನೆ ನೀಡಿತ್ತು. ಆ ಹತ್ತು ಜಿಲ್ಲೆಗಳ ಪೈಕಿ ಹಾವೇರಿ ಜಿಲ್ಲೆ ಕೂಡ ಆಯ್ಕೆಯಾಗಿತ್ತು.</p>.<p>ಹಾವೇರಿ ಜಿಲ್ಲಾಡಳಿತ ಭವನದ ಎದುರು 15 ಎಕರೆ ಜಾಗ ಗುರುತಿಸಿ, ₹4 ಕೋಟಿ ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ, ಅನುದಾನದ ಕೊರತೆ ಮತ್ತು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ 2015ರವರೆಗೆ ಕಾಮಗಾರಿಯೇ ಆರಂಭವಾಗಲಿಲ್ಲ.</p>.<p class="Subhead"><strong>₹3 ಕೋಟಿ ಬಿಡುಗಡೆ:</strong></p>.<p>2016ರಲ್ಲಿ ಅಂದಿನ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಅವರು ಮುತುವರ್ಜಿ ವಹಿಸಿ, ವಿಜ್ಞಾನ ಕೇಂದ್ರದ ಕಾಮಗಾರಿಗೆ ಚಾಲನೆ ಕೊಡಿಸಿದ್ದರು. ಅವರು ವರ್ಗಾವಣೆಯಾದ ನಂತರ ಹಾವೇರಿಗೆ ಬಂದ ಜಿಲ್ಲಾಧಿಕಾರಿಗಳು ಈ ಕೇಂದ್ರದ ಬಗ್ಗೆ ಆಸಕ್ತಿ ತೋರದ ಕಾರಣ ಕಾಮಗಾರಿ ನನೆಗುದಿಗೆ ಬಿದ್ದಿತು. ಬಿಡುಗಡೆಯಾದ ₹3 ಕೋಟಿಯಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರದವರು ₹2 ಕೋಟಿ ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಿಸಿದ್ದರೂ, ಕಾಮಗಾರಿ ಪೂರ್ಣಗೊಂಡಿಲ್ಲ.</p>.<p>ಮಂಜೂರಾಗಿದ್ದ ₹4 ಕೋಟಿ ಅನುದಾನದಲ್ಲಿ ಕಟ್ಟಡ, ಸೈನ್ಸ್ ಪಾರ್ಕ್, ವಸ್ತು ಸಂಗ್ರಹಾಲಯ, ತಾರಾಮಂಡಲ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಬೇಕಿತ್ತು. ಆದರೆ, ಇದುವರೆಗೂ ಕಟ್ಟಡ ಕೆಲಸ ಹೊರತುಪಡಿಸಿದರೆ ಬೇರೆ ಯಾವ ಕೆಲಸವೂ ನಡೆದಿಲ್ಲ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ–ಸ್ಟೆಪ್ಸ್) ಬಾಕಿ ₹1 ಕೋಟಿ ಬಿಡುಗಡೆ ಮಾಡಲು ಸಿದ್ಧವಿದ್ದರೂ, ಆ ಹಣದಲ್ಲಿ ವಿಜ್ಞಾನ ಕೇಂದ್ರ ರೂಪುಗೊಳ್ಳುವುದು ಕಷ್ಟಸಾಧ್ಯ.</p>.<p>‘ವರ್ಷಗಳು ಉರುಳಿದಂತೆ ಯೋಜನಾ ವೆಚ್ಚವೂ ಹೆಚ್ಚಾಗುತ್ತದೆ. ಹೀಗಾಗಿಯೇ ಅನುದಾನದ ಕೊರತೆಯಿಂದ ವಿಜ್ಞಾನ ಕೇಂದ್ರದ ಕೆಲಸಗಳು ನನೆಗುದಿಗೆ ಬಿದ್ದಿವೆ. ಅಗತ್ಯವಿರುವಷ್ಟು ಹಣ ಬಿಡುಗಡೆ ಮಾಡಿದರೆ, ವಿಜ್ಞಾನ ಕೇಂದ್ರ ಸಾಕಾರಗೊಳ್ಳುತ್ತದೆ’ ಎನ್ನುತ್ತಾರೆ ಹಾವೇರಿ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ತಿಮ್ಮೇಶ್.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯವರೇ ಆಗಿರುವುದರಿಂದ ವಿಜ್ಞಾನ ಕೇಂದ್ರಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿ, ವಿಜ್ಞಾನ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾರೆ ಎಂಬುದು ವಿಜ್ಞಾನ ಶಿಕ್ಷಕರ ನಿರೀಕ್ಷೆಯಾಗಿದೆ.</p>.<p>₹65 ಲಕ್ಷ ಬಿಡುಗಡೆ ಮಾಡಿದ್ದು, ಕೆಲಸ ಆರಂಭವಾಗುತ್ತಿದೆ. ಕಟ್ಟಡಕ್ಕೆ ₹2 ಕೋಟಿ, ಒಳಾಂಗಣ ವಿನ್ಯಾಸಕ್ಕೆ ₹5 ಕೋಟಿ ಅನುದಾನ ಬಿಡುಗಡೆಯಾಗಬೇಕಿದೆ<br />– ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ</p>.<p>ಕಾಂಪೌಂಡ್, ಗ್ಯಾಲರಿ, ಕಟ್ಟಡ ಹಾಗೂ ಇತರ ಉದ್ದೇಶಕ್ಕೆ ₹15 ಕೋಟಿ ಅನುದಾನ ಬಿಡುಗಡೆಗೆ ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಿದ್ದೇವೆ<br />– ಅಂದಾನಪ್ಪ ವಡಗೇರಿ, ಡಿಡಿಪಿಐ, ವಿಜ್ಞಾನ ಕೇಂದ್ರ ಸಮಿತಿಯ ಸದಸ್ಯ ಕಾರ್ಯದರ್ಶಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>