ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ನೆರವು ನೀಡಲು ಮನವಿ

Last Updated 2 ಜೂನ್ 2020, 12:18 IST
ಅಕ್ಷರ ಗಾತ್ರ

ಹಾವೇರಿ: ಕೋವಿಡ್‌ ಲಾಕ್‌ಡೌನ್‌ನಿಂದ ವೀರಶೈವ ಜಂಗಂ ಪುರೋಹಿತರು ಹಾಗೂ ಅರ್ಚಕರ ಬದುಕು ದುಸ್ತರವಾಗಿದೆ. ಹಾಗಾಗಿ ಆರ್ಥಿಕ ನೆರವು ನೀಡಬೇಕು ಎಂದು ಹಾವೇರಿ ತಾಲ್ಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಸದಸ್ಯರು ಮಂಗಳವಾರ ಸರ್ಕಾರವನ್ನು ಒತ್ತಾಯಿಸಿದರು.

ಎಲ್ಲ ದೇವಸ್ಥಾನ, ಮಠ ಮಂದಿರಗಳ ಪೂಜಾ ಸಮಾರಂಭ, ಜಾತ್ರೆ, ಉತ್ಸವ, ಹಬ್ಬ, ವಿವಾಹ, ಗೃಹಪ್ರವೇಶ ಮುಂತಾದ ಕಾರ್ಯಕ್ರಮಗಳು ರದ್ದಾದ ಪರಿಣಾಮ ಜೀವನ ನಿರ್ವಹಣೆ ಕಷ್ಟವಾಗಿದೆ. ಹಾಗಾಗಿ ಪರಿಹಾರ ನೀಡುವ ಮೂಲಕ ನಮ್ಮ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ.

ತಹಶೀಲ್ದಾರ್‌ ಶಂಕರ್‌ ಅವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT