‘ಬೆಳಗಾವಿ ವಿಭಾಗದ ಶಿಕ್ಷಣ ಆಯುಕ್ತರಿಗೆ ಈ ಕುರಿತು ಅಗತ್ಯ ಪರಿಹಾರ ಕ್ರಮವನ್ನು ಕೂಡಲೇ ಕೈಗೊಂಡು ಮಕ್ಕಳಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಸೂಚಿಸಿದ್ದೇನೆ’ ಎಂದು ಸಚಿವರು ಪ್ರತಿಕ್ರಿಯೆ ಕೂಡ ನೀಡಿದರು. ಹೀಗಾಗಿ, ವರದಿ ಪ್ರಕಟವಾದ ದಿನವೇ ಅಕ್ಷರ ದಾಸೋಹ ನಿರ್ದೇಶಕ, ಕ್ಷೇತ್ರ ಸಮನ್ವಯಾಧಿಕಾರಿ, ಶಿಕ್ಷಣ ಸಂಯೋಜಕ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಶಾಲೆಗೆ ಭೇಟಿ ನೀಡಿ, ಸಭೆ ನಡೆಸಿದರು. ಎಸ್ಡಿಎಂಸಿ ಸದಸ್ಯರು ಮತ್ತು ಶಿಕ್ಷಕರಿಂದ ಸಮಸ್ಯೆ ಆಲಿಸಿದರು.