<p><strong>ಹಾವೇರಿ</strong>: ಜಿಲ್ಲೆಯಾದ್ಯಂತ ಈದ್ ಮಿಲಾದ್ ಅನ್ನು ಮುಸ್ಲಿಂ ಸಮುದಾಯದವರು ಶುಕ್ರವಾರ ಸಂಭ್ರಮದಿಂದ ಆಚರಿಸಿದರು. ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಪ್ರವಾದಿ ಮುಹಮ್ಮದ್ ಜನ್ಮದಿನದ ಅಂಗವಾಗಿ ಮುಸ್ಲಿಮರು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಮಸೀದಿ ಹಾಗೂ ದರ್ಗಾಗಳಿಗೆ ಧ್ವಜಗಳನ್ನು ಕಟ್ಟಿ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ಮುಸ್ಲಿಂ ಸಮುದಾಯದವರು ಮೆರವಣಿಗೆ ನಡೆಸಿ, ಮುಹಮ್ಮದರ ಸಂದೇಶಗಳನ್ನು ಸಾರಿದರು.</p>.<p>ಶುಕ್ರವಾರ ನಮಾಜ್ ದಿನವಾಗಿದ್ದರಿಂದ, ಹಾವೇರಿಯಲ್ಲಿ ಬೆಳಿಗ್ಗೆ ನಡೆಯಬೇಕಿದ್ದ ಮೆರವಣಿಗೆಯನ್ನು ಸಂಜೆ ನಡೆಸಲಾಯಿತು. ಹಜರತ್ ಮೆಹಬೂಬ್ ಸುಭಾನಿ ದರ್ಗಾ ಬಳಿ ಚಾಲನೆ ನೀಡಲಾಯಿತು. ವಿವಿಧ ರಸ್ತೆಗಳಲ್ಲಿ ಸಾಗಿ, ದರ್ಗಾ ಬಳಿ ಸಮಾಪ್ತಿಗೊಂಡಿತು.</p>.<p>ಧರ್ಮಗುರುಗಳು ವಿಶೇಷ ಉಪನ್ಯಾಸ ನೀಡಿದರು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಶರಬತ್, ಮಜ್ಜಿಗೆ, ತಂಪು ಪಾನೀಯ ವಿತರಿಸುವ ಮೂಲಕ ಹಲವರು ಸೇವೆ ಮಾಡಿದರು.</p>.<p>ಹಾವೇರಿ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇರ್ಫಾನ್ ಖಾನ್ ಪಠಾಣ, ಉಪಾಧ್ಯಕ್ಷರಾದ ಚಮನ್ಸಾಬ್ ಮುಲ್ಲಾ, ಅನ್ವರ ಕಡೇಮನಿ, ಕಾರ್ಯದರ್ಶಿಗಳಾದ ಮುಜಾಫರ್ ಕೊಟ್ಟಿಗೇರಿ, ಖಜಾಂಚಿ ಗುಲಾಮ್ ಬಂಕಾಪುರ, ಹಾವೇರಿ ಶಹರ ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರಭುಗೌಡ ಬಿಸ್ಟನಗೌಡರ ಇದ್ದರು.</p>.<p>ಹಬ್ಬದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದರು.</p>.<h2>‘ಇಸ್ಲಾಂ ಅಸ್ತಿತ್ವಕ್ಕಾಗಿ ಶ್ರಮಿಸಿದ ಪೈಗಂಬರ್’</h2><h2></h2><p>ಬ್ಯಾಡಗಿ: ‘ಮಾನವೀಯ ಮೌಲ್ಯ ಅಳವಡಿಸಿಕೊಂಡಿದ್ದ ಮುಹಮ್ಮದ್ ಪೈಗಂಬರ್ ಅವರು ಇಸ್ಲಾಂ ಧರ್ಮದ ಅಸ್ತಿತ್ವಕ್ಕಾಗಿ ಸಾಕಷ್ಟು ಶ್ರಮಿಸಿದರು. ಬಡವರು, ಅನಾಥರ ಆರೈಕೆ ಮಾಡಿದರು’ ಎಂದು ಮುಖಂಡ ಎ.ಎಂ. ಸೌದಾಗರ ಹೇಳಿದರು.</p><p>ಈದ್ ಮಿಲಾದ್ ಅಂಗವಾಗಿ ಚಮನ್ ಶಾವಲಿ ದರ್ಗಾದಿಂದ ಶುಕ್ರವಾರ ನಡೆದ ಮೆರವಣೆಗೆಯಲ್ಲಿ ಮಾತನಾಡಿದರು. ಮೆರವಣಿಗೆಯಲ್ಲಿ ಧಾರ್ಮಿಕ ಹಾಡುಗಳನ್ನು ಹಾಡಲಾಯಿತು.</p><p>ನಗರ ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ಮುನಾಫ್ ಎರೆಸೀಮಿ, ಮುಕ್ತಿಯಾರ ಮುಲ್ಲಾ, ರಾಜೇಸಾಬ್ ಕಳ್ಯಾಳ, ಅಬ್ದುಲ್ ಸಮ್ಮದ ಬೆಳವಿಗಿ, ಶಫಿ ಮುಲ್ಲಾ, ಸವೀದ್ ಶಿಡೇನೂರ, ಅಬ್ದುಲ್ಮಜೀದ್ ಮುಲ್ಲಾ, ಮಂಜೂರಲಿ ಹಕಿಂ, ರಫೀಕ್ಸಾಬ್ ಬೆಳಗಾಂವ, ತೌಷಕ್ ಕಳ್ಯಾಳ, ಮುಕ್ತಿಯಾರ ಮುಲ್ಲಾ, ಯೂನಸ್ ಸವಣೂರ ಇದ್ದರು.</p> <h2>ತತ್ವಾದರ್ಶ ಪಾಲಿಸಲು ಸಲಹೆ</h2><h2></h2><p>ಸವಣೂರು: ‘ಈದ್ ಮಿಲಾದ್ ಪ್ರೀತಿ, ಶಾಂತಿ, ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯ ಸಾರುವ ಮಹತ್ವದ ಹಬ್ಬವಾಗಿದೆ’ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ತಿಳಿಸಿದರು.</p><p>ಪಟ್ಟಣದ ಆಸಾರ್ ಏ ಷರೀಫ್ ದರ್ಗಾದಲ್ಲಿ ನಡೆದ ಪ್ರಾರ್ಥನೆ ಬಳಿಕ ಮಾತನಾಡಿದರು.</p><p>‘ಸತ್ಯ, ದಯೆ, ಸಮಾನತೆ ಮತ್ತು ಸಹೋದರತ್ವ ಸಂದೇಶವನ್ನು ಪೈಗಂಬರ್ ಪಸರಿಸಿದರು. ಅವರ ಬದುಕು ಮಾನವೀಯತೆಯ ಪಾಠ ಕಲಿಸುತ್ತದೆ. ಧರ್ಮ, ಜಾತಿ ಭೇದವಿಲ್ಲದೆ ಸಹಜೀವನ ನಡೆಸುವ ತತ್ವ ಅವರದ್ದಾಗಿತ್ತು’ ಎಂದರು.</p> <h2>ಸಡಗರದ ಆಚರಣೆ</h2><h2></h2><p>ತಿಳವಳ್ಳಿ: ಈದ್ ಮಿಲಾದ್ ಅಂಗವಾಗಿ ಇಲ್ಲಿನ ಪ್ರಮುಖ ಬೀದಿಗಳಲ್ಲಿ ಸ್ತಬ್ಧಚಿತ್ರಗಳು, ಘೋಷವಾಕ್ಯಗಳ ಫಲಕದೊಂದಿಗೆ ಮುಸ್ಲಿಮರು ಮೆರವಣಿಗೆ ನಡೆಸಿದರು. ಜಾಮೀಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.</p><p>ಪ್ರಮುಖ ರಸ್ತೆ, ವೃತ್ತಗಳಲ್ಲಿ ಭಿತ್ತಿಪತ್ರಗಳು, ಬ್ಯಾನರ್ಗಳು ರಾರಾಜಿಸಿದವು. ಮುಸ್ಲಿಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p><p>ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಣ್ಣು, ಸಿಹಿ ತನಿಸು ಹಾಗೂ ತಂಪು ಪಾನೀಯ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯಾದ್ಯಂತ ಈದ್ ಮಿಲಾದ್ ಅನ್ನು ಮುಸ್ಲಿಂ ಸಮುದಾಯದವರು ಶುಕ್ರವಾರ ಸಂಭ್ರಮದಿಂದ ಆಚರಿಸಿದರು. ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಪ್ರವಾದಿ ಮುಹಮ್ಮದ್ ಜನ್ಮದಿನದ ಅಂಗವಾಗಿ ಮುಸ್ಲಿಮರು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p>.<p>ಮಸೀದಿ ಹಾಗೂ ದರ್ಗಾಗಳಿಗೆ ಧ್ವಜಗಳನ್ನು ಕಟ್ಟಿ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ಮುಸ್ಲಿಂ ಸಮುದಾಯದವರು ಮೆರವಣಿಗೆ ನಡೆಸಿ, ಮುಹಮ್ಮದರ ಸಂದೇಶಗಳನ್ನು ಸಾರಿದರು.</p>.<p>ಶುಕ್ರವಾರ ನಮಾಜ್ ದಿನವಾಗಿದ್ದರಿಂದ, ಹಾವೇರಿಯಲ್ಲಿ ಬೆಳಿಗ್ಗೆ ನಡೆಯಬೇಕಿದ್ದ ಮೆರವಣಿಗೆಯನ್ನು ಸಂಜೆ ನಡೆಸಲಾಯಿತು. ಹಜರತ್ ಮೆಹಬೂಬ್ ಸುಭಾನಿ ದರ್ಗಾ ಬಳಿ ಚಾಲನೆ ನೀಡಲಾಯಿತು. ವಿವಿಧ ರಸ್ತೆಗಳಲ್ಲಿ ಸಾಗಿ, ದರ್ಗಾ ಬಳಿ ಸಮಾಪ್ತಿಗೊಂಡಿತು.</p>.<p>ಧರ್ಮಗುರುಗಳು ವಿಶೇಷ ಉಪನ್ಯಾಸ ನೀಡಿದರು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಶರಬತ್, ಮಜ್ಜಿಗೆ, ತಂಪು ಪಾನೀಯ ವಿತರಿಸುವ ಮೂಲಕ ಹಲವರು ಸೇವೆ ಮಾಡಿದರು.</p>.<p>ಹಾವೇರಿ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇರ್ಫಾನ್ ಖಾನ್ ಪಠಾಣ, ಉಪಾಧ್ಯಕ್ಷರಾದ ಚಮನ್ಸಾಬ್ ಮುಲ್ಲಾ, ಅನ್ವರ ಕಡೇಮನಿ, ಕಾರ್ಯದರ್ಶಿಗಳಾದ ಮುಜಾಫರ್ ಕೊಟ್ಟಿಗೇರಿ, ಖಜಾಂಚಿ ಗುಲಾಮ್ ಬಂಕಾಪುರ, ಹಾವೇರಿ ಶಹರ ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರಭುಗೌಡ ಬಿಸ್ಟನಗೌಡರ ಇದ್ದರು.</p>.<p>ಹಬ್ಬದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದರು.</p>.<h2>‘ಇಸ್ಲಾಂ ಅಸ್ತಿತ್ವಕ್ಕಾಗಿ ಶ್ರಮಿಸಿದ ಪೈಗಂಬರ್’</h2><h2></h2><p>ಬ್ಯಾಡಗಿ: ‘ಮಾನವೀಯ ಮೌಲ್ಯ ಅಳವಡಿಸಿಕೊಂಡಿದ್ದ ಮುಹಮ್ಮದ್ ಪೈಗಂಬರ್ ಅವರು ಇಸ್ಲಾಂ ಧರ್ಮದ ಅಸ್ತಿತ್ವಕ್ಕಾಗಿ ಸಾಕಷ್ಟು ಶ್ರಮಿಸಿದರು. ಬಡವರು, ಅನಾಥರ ಆರೈಕೆ ಮಾಡಿದರು’ ಎಂದು ಮುಖಂಡ ಎ.ಎಂ. ಸೌದಾಗರ ಹೇಳಿದರು.</p><p>ಈದ್ ಮಿಲಾದ್ ಅಂಗವಾಗಿ ಚಮನ್ ಶಾವಲಿ ದರ್ಗಾದಿಂದ ಶುಕ್ರವಾರ ನಡೆದ ಮೆರವಣೆಗೆಯಲ್ಲಿ ಮಾತನಾಡಿದರು. ಮೆರವಣಿಗೆಯಲ್ಲಿ ಧಾರ್ಮಿಕ ಹಾಡುಗಳನ್ನು ಹಾಡಲಾಯಿತು.</p><p>ನಗರ ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ಮುನಾಫ್ ಎರೆಸೀಮಿ, ಮುಕ್ತಿಯಾರ ಮುಲ್ಲಾ, ರಾಜೇಸಾಬ್ ಕಳ್ಯಾಳ, ಅಬ್ದುಲ್ ಸಮ್ಮದ ಬೆಳವಿಗಿ, ಶಫಿ ಮುಲ್ಲಾ, ಸವೀದ್ ಶಿಡೇನೂರ, ಅಬ್ದುಲ್ಮಜೀದ್ ಮುಲ್ಲಾ, ಮಂಜೂರಲಿ ಹಕಿಂ, ರಫೀಕ್ಸಾಬ್ ಬೆಳಗಾಂವ, ತೌಷಕ್ ಕಳ್ಯಾಳ, ಮುಕ್ತಿಯಾರ ಮುಲ್ಲಾ, ಯೂನಸ್ ಸವಣೂರ ಇದ್ದರು.</p> <h2>ತತ್ವಾದರ್ಶ ಪಾಲಿಸಲು ಸಲಹೆ</h2><h2></h2><p>ಸವಣೂರು: ‘ಈದ್ ಮಿಲಾದ್ ಪ್ರೀತಿ, ಶಾಂತಿ, ಸಹಿಷ್ಣುತೆ ಹಾಗೂ ಮಾನವೀಯ ಮೌಲ್ಯ ಸಾರುವ ಮಹತ್ವದ ಹಬ್ಬವಾಗಿದೆ’ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ತಿಳಿಸಿದರು.</p><p>ಪಟ್ಟಣದ ಆಸಾರ್ ಏ ಷರೀಫ್ ದರ್ಗಾದಲ್ಲಿ ನಡೆದ ಪ್ರಾರ್ಥನೆ ಬಳಿಕ ಮಾತನಾಡಿದರು.</p><p>‘ಸತ್ಯ, ದಯೆ, ಸಮಾನತೆ ಮತ್ತು ಸಹೋದರತ್ವ ಸಂದೇಶವನ್ನು ಪೈಗಂಬರ್ ಪಸರಿಸಿದರು. ಅವರ ಬದುಕು ಮಾನವೀಯತೆಯ ಪಾಠ ಕಲಿಸುತ್ತದೆ. ಧರ್ಮ, ಜಾತಿ ಭೇದವಿಲ್ಲದೆ ಸಹಜೀವನ ನಡೆಸುವ ತತ್ವ ಅವರದ್ದಾಗಿತ್ತು’ ಎಂದರು.</p> <h2>ಸಡಗರದ ಆಚರಣೆ</h2><h2></h2><p>ತಿಳವಳ್ಳಿ: ಈದ್ ಮಿಲಾದ್ ಅಂಗವಾಗಿ ಇಲ್ಲಿನ ಪ್ರಮುಖ ಬೀದಿಗಳಲ್ಲಿ ಸ್ತಬ್ಧಚಿತ್ರಗಳು, ಘೋಷವಾಕ್ಯಗಳ ಫಲಕದೊಂದಿಗೆ ಮುಸ್ಲಿಮರು ಮೆರವಣಿಗೆ ನಡೆಸಿದರು. ಜಾಮೀಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.</p><p>ಪ್ರಮುಖ ರಸ್ತೆ, ವೃತ್ತಗಳಲ್ಲಿ ಭಿತ್ತಿಪತ್ರಗಳು, ಬ್ಯಾನರ್ಗಳು ರಾರಾಜಿಸಿದವು. ಮುಸ್ಲಿಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.</p><p>ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಣ್ಣು, ಸಿಹಿ ತನಿಸು ಹಾಗೂ ತಂಪು ಪಾನೀಯ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>