<p>ಶಿಗ್ಗಾವಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಕಾನೂನಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಲೋಪ ದೋಷಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದಕ್ಕಮ್ಮನವರ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ತಾಲ್ಲೂಕಿನ ಬಂಕಾಪುರ ಪುರಸಭೆ, ಧುಂಡಸಿ ಮತ್ತು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತೆರೆದಿರುವ ಚುನಾವಣಾ ಮತಗಟ್ಟೆಗಳನ್ನು ಬುಧವಾರ ವೀಕ್ಷಿಸಿದ ನಂತರ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಒಟ್ಟು 1,740 ಪದವೀಧರ ಮತದಾರರಿದ್ದು, ತಾಲ್ಲೂಕಿನ ಧುಂಡಸಿ ಗ್ರಾಮ ಪಂಚಾಯ್ತಿಯಲ್ಲಿ 1, ಬಂಕಾಪುರ ಪಟ್ಟಣದ ಪುರಸಭೆಯಲ್ಲಿ 1, ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ 2 ಮತಗಟ್ಟೆಗಳಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗುತ್ತಿದೆ. ಮುಖ್ಯವಾಗಿ ಸ್ವಚ್ಛತೆ ಕಾಪಾಡಬೇಕು. ಚುನಾವಣಾ ವಿಭಾಗದ ಆದೇಶದಂತೆ ಪ್ರತಿಯೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಕೋವಿಡ್-19 ನಿಯಮಾವಳಿ ಪಾಲಿಸಿಕೊಂಡು ಪರಸ್ಪರ ಅಂತರ, ಸ್ಯಾನಿಟೈಜರ್ ಬಳಿಕೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸರತಿಯಲ್ಲಿ ನಿಂತು ಮತದಾನ ಮಾಡಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತು ಎಲ್ಲ ಅಧಿಕಾರಿಗೊಂದಿಗೆ ಚರ್ಚಿಸಿ ಸೂಚನೆ ನೀಡಲಾಗಿದೆ. ಹಾಗೆಯೇ ಬಂಕಾಪುರ ನಾಡಕಚೇರಿಗೆ ಭೇಟಿ ನೀಡಿ ದುರಸ್ತಿ ಕಾರ್ಯ ಕೈಗೊ ಳ್ಳುವಂತೆ ಸಲಹೆ ನೀಡಲಾಗಿದೆ ಎಂದರು.</p>.<p>ತಹಶೀಲ್ದಾರ್ ಪ್ರಕಾಶ ಕುದರಿ, ಶಿರಸ್ತೇದಾರ ಗಣೇಶ ಸವಣೂರ, ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ಧುಂಡಸಿ ಉಪತಹಶೀಲ್ದಾರ್ ಬಸವರಾಜ ಹೊಂಕಳೆಪ್ಪನವರ, ಬಂಕಾಪುರ ಉಪತಹಶೀಲ್ದಾರ್ ಎಂ.ಎಸ್.ಪಾಟೀಲ ಸೇರಿದಂತೆ ತಹಶೀಲ್ದಾರ್ ಕಚೇರಿ, ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಕಾನೂನಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಲೋಪ ದೋಷಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣಾ ಮುದಕ್ಕಮ್ಮನವರ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ತಾಲ್ಲೂಕಿನ ಬಂಕಾಪುರ ಪುರಸಭೆ, ಧುಂಡಸಿ ಮತ್ತು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತೆರೆದಿರುವ ಚುನಾವಣಾ ಮತಗಟ್ಟೆಗಳನ್ನು ಬುಧವಾರ ವೀಕ್ಷಿಸಿದ ನಂತರ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಒಟ್ಟು 1,740 ಪದವೀಧರ ಮತದಾರರಿದ್ದು, ತಾಲ್ಲೂಕಿನ ಧುಂಡಸಿ ಗ್ರಾಮ ಪಂಚಾಯ್ತಿಯಲ್ಲಿ 1, ಬಂಕಾಪುರ ಪಟ್ಟಣದ ಪುರಸಭೆಯಲ್ಲಿ 1, ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ 2 ಮತಗಟ್ಟೆಗಳಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗುತ್ತಿದೆ. ಮುಖ್ಯವಾಗಿ ಸ್ವಚ್ಛತೆ ಕಾಪಾಡಬೇಕು. ಚುನಾವಣಾ ವಿಭಾಗದ ಆದೇಶದಂತೆ ಪ್ರತಿಯೊಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಕೋವಿಡ್-19 ನಿಯಮಾವಳಿ ಪಾಲಿಸಿಕೊಂಡು ಪರಸ್ಪರ ಅಂತರ, ಸ್ಯಾನಿಟೈಜರ್ ಬಳಿಕೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಸರತಿಯಲ್ಲಿ ನಿಂತು ಮತದಾನ ಮಾಡಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ. ಈ ಕುರಿತು ಎಲ್ಲ ಅಧಿಕಾರಿಗೊಂದಿಗೆ ಚರ್ಚಿಸಿ ಸೂಚನೆ ನೀಡಲಾಗಿದೆ. ಹಾಗೆಯೇ ಬಂಕಾಪುರ ನಾಡಕಚೇರಿಗೆ ಭೇಟಿ ನೀಡಿ ದುರಸ್ತಿ ಕಾರ್ಯ ಕೈಗೊ ಳ್ಳುವಂತೆ ಸಲಹೆ ನೀಡಲಾಗಿದೆ ಎಂದರು.</p>.<p>ತಹಶೀಲ್ದಾರ್ ಪ್ರಕಾಶ ಕುದರಿ, ಶಿರಸ್ತೇದಾರ ಗಣೇಶ ಸವಣೂರ, ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ಧುಂಡಸಿ ಉಪತಹಶೀಲ್ದಾರ್ ಬಸವರಾಜ ಹೊಂಕಳೆಪ್ಪನವರ, ಬಂಕಾಪುರ ಉಪತಹಶೀಲ್ದಾರ್ ಎಂ.ಎಸ್.ಪಾಟೀಲ ಸೇರಿದಂತೆ ತಹಶೀಲ್ದಾರ್ ಕಚೇರಿ, ಪುರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>