ರೈತರ ಸಾಲಮನ್ನಾ ಮಾಡುವುದಾಗಿ ಸ್ವತಃ ಘೋಷಣೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈಗ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ಗೆ ಗತಿ ಇಲ್ಲದ ಕಾರಣ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಕುಮಾರಸ್ವಾಮಿ, ದೇವೇಗೌಡರು ಮತ್ತು ರೇವಣ್ಣ ಅಧಿಕಾರ ನಡೆಸುತ್ತಿದ್ದಾರೆ ಎಂದರು.