<p><strong>ಹಾವೇರಿ</strong>: ‘ಪದವೀಧರರ ಬೇಡಿಕೆ ಈಡೇರಿಸುವಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ವಿಫಲರಾಗುತ್ತಿದ್ದು, ಕ್ಷೇತ್ರದ ಬುದ್ಧಿವಂತ ಮತದಾರರು ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಈ ಬಾರಿ ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸುವ ವಿಶ್ವಾಸವಿದೆ’ ಎಂದು ಪಕ್ಷೇತರ ಅಭ್ಯರ್ಥಿ ಶಿವಕುಮಾರ ತಳವಾರ ಹೇಳಿದರು.</p>.<p>ಹಾವೇರಿ ನಗರದಲ್ಲಿ ಪಶ್ಚಿಮ ಪದವೀಧರ ವಿಧಾನ ಪರಿಷತ್ ಸದಸ್ಯರ ಚುನಾವಣೆಯ ಮತದಾರರ ಮನೆ–ಮನೆಗಳಿಗೆ ತೆರಳಿ ಪ್ರಚಾರ ಸಂದರ್ಭದಲ್ಲಿ ಅವರು ಪ್ರತಿಕ್ರಿಯಿಸಿದರು.</p>.<p>‘ಈ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ 4 ಜಿಲ್ಲೆಗಳಲ್ಲಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಸರ್ಕಾರಿ, ಅರೆ ಸರ್ಕಾರಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಾಗೂ ಐಟಿ– ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮಾತ್ರ ಉದ್ಯೋಗವಕಾಶ ನೀಡುವ ಕಾನೂನು ಮಾಡಲು ಹೋರಾಟ ಮಾಡಲಾಗುವುದು’ ಎಂದರು.</p>.<p>ಪರಶುರಾಮ ಬಾರ್ಕಿ, ಜಗದೀಶ ಕುಲಕರ್ಣಿ, ಯಲ್ಲಪ್ಪ ಗುಡ್ಡಪ್ಪನವರ, ಬ್ರಹ್ಮಾನಂದ, ಮಹ್ಮದ್ ಷರೀಫ್, ಮಂಜುನಾಥ ಮುಗದೂರ, ಗೌತಮ ಕಂಬಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಪದವೀಧರರ ಬೇಡಿಕೆ ಈಡೇರಿಸುವಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ವಿಫಲರಾಗುತ್ತಿದ್ದು, ಕ್ಷೇತ್ರದ ಬುದ್ಧಿವಂತ ಮತದಾರರು ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಈ ಬಾರಿ ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸುವ ವಿಶ್ವಾಸವಿದೆ’ ಎಂದು ಪಕ್ಷೇತರ ಅಭ್ಯರ್ಥಿ ಶಿವಕುಮಾರ ತಳವಾರ ಹೇಳಿದರು.</p>.<p>ಹಾವೇರಿ ನಗರದಲ್ಲಿ ಪಶ್ಚಿಮ ಪದವೀಧರ ವಿಧಾನ ಪರಿಷತ್ ಸದಸ್ಯರ ಚುನಾವಣೆಯ ಮತದಾರರ ಮನೆ–ಮನೆಗಳಿಗೆ ತೆರಳಿ ಪ್ರಚಾರ ಸಂದರ್ಭದಲ್ಲಿ ಅವರು ಪ್ರತಿಕ್ರಿಯಿಸಿದರು.</p>.<p>‘ಈ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ 4 ಜಿಲ್ಲೆಗಳಲ್ಲಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಸರ್ಕಾರಿ, ಅರೆ ಸರ್ಕಾರಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಾಗೂ ಐಟಿ– ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮಾತ್ರ ಉದ್ಯೋಗವಕಾಶ ನೀಡುವ ಕಾನೂನು ಮಾಡಲು ಹೋರಾಟ ಮಾಡಲಾಗುವುದು’ ಎಂದರು.</p>.<p>ಪರಶುರಾಮ ಬಾರ್ಕಿ, ಜಗದೀಶ ಕುಲಕರ್ಣಿ, ಯಲ್ಲಪ್ಪ ಗುಡ್ಡಪ್ಪನವರ, ಬ್ರಹ್ಮಾನಂದ, ಮಹ್ಮದ್ ಷರೀಫ್, ಮಂಜುನಾಥ ಮುಗದೂರ, ಗೌತಮ ಕಂಬಳಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>