ವಾಣಿಜ್ಯ ತೆರಿಗೆ ಇಲಾಖೆ (ಜಿ.ಎಸ್.ಟಿ)ಯ ಯೋಜನೆಗಳ ಮಾಹಿತಿ ಕುರಿತು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಸಹಾಯಕ ಕಮಿಷನರ್ ರುಕ್ಸಾನಾ ಗುಡಗೇರಿ ಹಾಗೂ ನಬಾರ್ಡ್ನ ವಿಭಾಗೀಯ ವ್ಯವಸ್ಥಾಪಕ ಮಹಾದೇವ ಕೀರ್ತಿ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎಂ.ವಿ.ಹೊಂಬರಡಿ, ಸಣ್ಣ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ರಮೇಶ ಬಳ್ಳಾರಿ, ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ, ಸಾಂಬಾರು ಮಂಡಳಿಯ ಬಾಪುಗೌಡ ಮಾತನಾಡಿದರು.