<p><strong>ರಾಣೆಬೆನ್ನೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುದಾನರಹಿತ ಶಾಲಾ ಶಿಕ್ಷಕರಿಗೆ ₹ 5 ಸಾವಿರ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಶಿಕ್ಷಕರು ಹಾಗೂ ಪದವೀಧರರ ಘಟಕದ ರಾಜ್ಯ ಘಟಕದ ಅಧ್ಯಕ್ಷ ಡಾ. ಆರ್. ಎಂ.ಕುಬೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇವಲ ಶಾಲಾ-ಶಿಕ್ಷಕರಿಗೆಂದು ವರದಿಯಾಗಿದ್ದು, ಇದರಿಂದ ಪದವಿ-ಪೂರ್ವ ಕಾಲೇಜ್ ಹಾಗೂ ಪದವಿ ಕಾಲೇಜ್ನ ಉಪನ್ಯಾಸಕರನ್ನು ಈ ಸೌಲಭ್ಯದಿಂದ ಹೊರಗಿಡಲಾಗಿದೆ. ಇಂತಹ ತಾರತಮ್ಯದ ನಡೆ ಖಂಡನೀಯ ಎಂದರು.</p>.<p>ಶಿಕ್ಷಕರಿಗೆ ಸಹಾಯ ಮಾಡುವ ಒಳ್ಳೆಯ ಉದ್ದೇಶವಿದ್ದಲ್ಲಿ ಅನುದಾನ ರಹಿತ ಶಾಲಾ-ಕಾಲೇಜ್ ಮತ್ತು ಪದವಿ ಹಾಗೂ ವಿಶ್ವವಿದ್ಯಾ ಲಯದ ಎಲ್ಲಾ ಶಿಕ್ಷಕರಿಗೂ ಈ ಆರ್ಥಿಕ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಅನುದಾನಿತ ಶಾಲಾ-ಕಾಲೇಜುಗಳಲ್ಲಿ ನಿವೃತ್ತಿಯಿಂದ ಖಾಲಿ ಇರುವ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ತಾತ್ಕಾಲಿಕ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುದಾನರಹಿತ ಶಾಲಾ ಶಿಕ್ಷಕರಿಗೆ ₹ 5 ಸಾವಿರ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಶಿಕ್ಷಕರು ಹಾಗೂ ಪದವೀಧರರ ಘಟಕದ ರಾಜ್ಯ ಘಟಕದ ಅಧ್ಯಕ್ಷ ಡಾ. ಆರ್. ಎಂ.ಕುಬೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇವಲ ಶಾಲಾ-ಶಿಕ್ಷಕರಿಗೆಂದು ವರದಿಯಾಗಿದ್ದು, ಇದರಿಂದ ಪದವಿ-ಪೂರ್ವ ಕಾಲೇಜ್ ಹಾಗೂ ಪದವಿ ಕಾಲೇಜ್ನ ಉಪನ್ಯಾಸಕರನ್ನು ಈ ಸೌಲಭ್ಯದಿಂದ ಹೊರಗಿಡಲಾಗಿದೆ. ಇಂತಹ ತಾರತಮ್ಯದ ನಡೆ ಖಂಡನೀಯ ಎಂದರು.</p>.<p>ಶಿಕ್ಷಕರಿಗೆ ಸಹಾಯ ಮಾಡುವ ಒಳ್ಳೆಯ ಉದ್ದೇಶವಿದ್ದಲ್ಲಿ ಅನುದಾನ ರಹಿತ ಶಾಲಾ-ಕಾಲೇಜ್ ಮತ್ತು ಪದವಿ ಹಾಗೂ ವಿಶ್ವವಿದ್ಯಾ ಲಯದ ಎಲ್ಲಾ ಶಿಕ್ಷಕರಿಗೂ ಈ ಆರ್ಥಿಕ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಅನುದಾನಿತ ಶಾಲಾ-ಕಾಲೇಜುಗಳಲ್ಲಿ ನಿವೃತ್ತಿಯಿಂದ ಖಾಲಿ ಇರುವ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ತಾತ್ಕಾಲಿಕ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>