<p><strong>ಗುತ್ತಲ</strong>: ಪಟ್ಟಣದ ನೆಮ್ಮದಿ ಕೇಂದ್ರದಲ್ಲಿ ಆಧಾರ ತಿದ್ದುಪಡಿ ಸೇರಿದಂತೆ ಅರ್ಜಿ ನಮೂನೆಗಳಿಗೆ ಸರ್ಕಾರ ನಿಗದಿಪಡಿಸಿದ ಹಣಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಉಪ ತಶೀಲ್ದಾರರ್ಗೆ ಮನವಿ ಸಲ್ಲಿಸಿದರು.</p>.<p>ಆಧಾರ ತಿದ್ದುಪಡಿಗೆ ಸರ್ಕಾರ ₹25ರಿಂದ ₹30 ನಿಗದಿಪಡಿಸಿದೆ. ಆದರೆ ನೆಮ್ಮದಿ ಕೇಂದ್ರಗಳಲ್ಲಿ ₹150ರಿಂದ ₹200 ವಸೂಲಿ ಮಾಡಲಾಗುತ್ತಿದೆ. ಇಂತಹ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಉಪತಹಶೀಲ್ದಾರ್ ಎಂ.ಡಿ.ಕಿಚಡೇರ ಮಾತನಾಡಿ, ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು. ಅಂತಹ ಘಟನೆಗಳು ನಡೆದಿದ್ದರೂ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ಹಾವೇರಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಲೇಶ ಹಾಲಣ್ಣನವರ, ಚನ್ನಪ್ಪ ಹೊನ್ನಮ್ಮನವರ, ದಾದಾಪೀರ ಕಾಲೆಕಾನವರ, ಗೌಸ್ಪಾಕ್ ಬಾಲೆಬಾಯಿ, ಬಸಣ್ಣ ಅರಳಿ, ವೀರೇಶ ಕಮ್ಮಾರ, ಮಲ್ಲಿಕಾರ್ಜುನ ಪಾಟೀಲ, ಕುಮಾರ ರಾಮಾಪೂರಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ</strong>: ಪಟ್ಟಣದ ನೆಮ್ಮದಿ ಕೇಂದ್ರದಲ್ಲಿ ಆಧಾರ ತಿದ್ದುಪಡಿ ಸೇರಿದಂತೆ ಅರ್ಜಿ ನಮೂನೆಗಳಿಗೆ ಸರ್ಕಾರ ನಿಗದಿಪಡಿಸಿದ ಹಣಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಉಪ ತಶೀಲ್ದಾರರ್ಗೆ ಮನವಿ ಸಲ್ಲಿಸಿದರು.</p>.<p>ಆಧಾರ ತಿದ್ದುಪಡಿಗೆ ಸರ್ಕಾರ ₹25ರಿಂದ ₹30 ನಿಗದಿಪಡಿಸಿದೆ. ಆದರೆ ನೆಮ್ಮದಿ ಕೇಂದ್ರಗಳಲ್ಲಿ ₹150ರಿಂದ ₹200 ವಸೂಲಿ ಮಾಡಲಾಗುತ್ತಿದೆ. ಇಂತಹ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಉಪತಹಶೀಲ್ದಾರ್ ಎಂ.ಡಿ.ಕಿಚಡೇರ ಮಾತನಾಡಿ, ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು. ಅಂತಹ ಘಟನೆಗಳು ನಡೆದಿದ್ದರೂ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ಹಾವೇರಿ ತಾಲ್ಲೂಕು ಘಟಕದ ಅಧ್ಯಕ್ಷ ಹಾಲೇಶ ಹಾಲಣ್ಣನವರ, ಚನ್ನಪ್ಪ ಹೊನ್ನಮ್ಮನವರ, ದಾದಾಪೀರ ಕಾಲೆಕಾನವರ, ಗೌಸ್ಪಾಕ್ ಬಾಲೆಬಾಯಿ, ಬಸಣ್ಣ ಅರಳಿ, ವೀರೇಶ ಕಮ್ಮಾರ, ಮಲ್ಲಿಕಾರ್ಜುನ ಪಾಟೀಲ, ಕುಮಾರ ರಾಮಾಪೂರಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>