ಗುತ್ತಲ ಪಟ್ಟಣದಿಂದ ಸುತ್ತ ಮುತ್ತಲಿನ ಹಳ್ಳಿಗಳಿಗೆ ಹಾಗೂ ಗದಗ, ಬಳ್ಳಾರಿ, ದಾವಣಗೆರೆಗೆ ಜನರು ಸಂಚರಿಸುತ್ತಾರೆ. ಆದರೆ, ಬಸ್ ನಿಲ್ದಾಣದ ಆವರಣದಲ್ಲಿ ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ಇರುವುದಿಲ್ಲ. ಆದ್ದರಿಂದ ತಾವುಗಳು ದಯಮಾಡಿ ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ಹಾಗೂ ಮಳೆ, ಚಳಿ, ಬಿಸಿಲಿನ ತಾಪ ರಕ್ಷಣೆಗಾಗಿ ಚಾವಣಿ ಮತ್ತು ಉತ್ತಮ ಆಸನಗಳನ್ನು ಅಳವಡಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಅವರಿಗೆ ಜೆಡಿಎಸ್ ವತಿಯಿಂದ ಮನವಿ ಸಲ್ಲಿಸಲಾಯಿತು.