<p><strong>ರಟ್ಟೀಹಳ್ಳಿ: </strong>ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿ ತಲುಪಿದ್ದ ತಾಲ್ಲೂಕಿನ ಹಳ್ಳೂರು ಗ್ರಾಮದ ಕವನ ಹಿರೇಮಠ (21) ಕುಟುಂಬಸ್ಥರು ಆಕೆಯ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾರೆ.</p>.<p>ಚರ್ಮ, ಹೃದಯ, ಕಿಡ್ನಿ, ಕಣ್ಣು, ಲಿವರ್ ದಾನ ಮಾಡಲಾಗಿದೆ.</p>.<p>ಈಚೆಗೆ ಶಿಕಾರಿಪುರದ ಗಾರ್ಮೆಂಟ್ಸ್ನಲ್ಲಿ ಕೆಲಸ ಮುಗಿಸಿ ಸ್ವಗ್ರಾಮ ಹಳ್ಳೂರಿಗೆ ಮರಳುವ ಮಾರ್ಗ ಮಧ್ಯ ಸೊರಟೂರ ಸಮೀಪ ಮಾರುತಿ ಓಮಿನಿಯು ಎತ್ತಿನಗಾಡಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು.</p>.<p>ಎತ್ತಿನಗಾಡಿಯಲ್ಲಿದ್ದ ಪತಿ, ಪತ್ನಿ ಹಾಗೂ ಎರಡು ಎತ್ತುಗಳು ಸ್ಥಳದಲ್ಲಿಯೇ ಮೃತಪಟ್ಟವು. ಓಮಿನಿಯಲ್ಲಿ ಪ್ರಯಾಣಿಸುತ್ತಿದ್ದ ಕವನಾ, ರೂಪಾ ಬುಳ್ಳಾಪುರ, ಶಶಿಕಲಾ ಬಾರ್ಕಿ, ಕವಿತಾ ಜಿನ್ನಳ್ಳಿ, ಶ್ರುತಿ ಮುದೇನೂರು ತೀವ್ರ ಗಾಯಗೊಂಡಿದ್ದರು.</p>.<p>ಚೈತ್ರ ಕೆಂಗಣ್ಣನವರ ಸ್ಥಳದಲ್ಲಿಯೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿದ್ದ ಕವನಳನ್ನು ಸೊರಟೂರು ಗ್ರಾಮಸ್ಥರು ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟರು. ಅಲ್ಲಿಂದ ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.</p>.<p>ಬದುಕಿದರೂ ಜೀವಂತ ಶವವಾಗಿರುತ್ತಾಳೆ ಎಂದು ತಿಳಿದ ಕವನಾಳ ತಾಯಿ, ಸಹೋದರಿ, ಸೋದರಮಾವ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಭಾನುವಾರ ಅಂತ್ಯಸಂಸ್ಕಾರ ಹಳ್ಳೂರಿನಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ: </strong>ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿ ತಲುಪಿದ್ದ ತಾಲ್ಲೂಕಿನ ಹಳ್ಳೂರು ಗ್ರಾಮದ ಕವನ ಹಿರೇಮಠ (21) ಕುಟುಂಬಸ್ಥರು ಆಕೆಯ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾರೆ.</p>.<p>ಚರ್ಮ, ಹೃದಯ, ಕಿಡ್ನಿ, ಕಣ್ಣು, ಲಿವರ್ ದಾನ ಮಾಡಲಾಗಿದೆ.</p>.<p>ಈಚೆಗೆ ಶಿಕಾರಿಪುರದ ಗಾರ್ಮೆಂಟ್ಸ್ನಲ್ಲಿ ಕೆಲಸ ಮುಗಿಸಿ ಸ್ವಗ್ರಾಮ ಹಳ್ಳೂರಿಗೆ ಮರಳುವ ಮಾರ್ಗ ಮಧ್ಯ ಸೊರಟೂರ ಸಮೀಪ ಮಾರುತಿ ಓಮಿನಿಯು ಎತ್ತಿನಗಾಡಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು.</p>.<p>ಎತ್ತಿನಗಾಡಿಯಲ್ಲಿದ್ದ ಪತಿ, ಪತ್ನಿ ಹಾಗೂ ಎರಡು ಎತ್ತುಗಳು ಸ್ಥಳದಲ್ಲಿಯೇ ಮೃತಪಟ್ಟವು. ಓಮಿನಿಯಲ್ಲಿ ಪ್ರಯಾಣಿಸುತ್ತಿದ್ದ ಕವನಾ, ರೂಪಾ ಬುಳ್ಳಾಪುರ, ಶಶಿಕಲಾ ಬಾರ್ಕಿ, ಕವಿತಾ ಜಿನ್ನಳ್ಳಿ, ಶ್ರುತಿ ಮುದೇನೂರು ತೀವ್ರ ಗಾಯಗೊಂಡಿದ್ದರು.</p>.<p>ಚೈತ್ರ ಕೆಂಗಣ್ಣನವರ ಸ್ಥಳದಲ್ಲಿಯೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿದ್ದ ಕವನಳನ್ನು ಸೊರಟೂರು ಗ್ರಾಮಸ್ಥರು ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟರು. ಅಲ್ಲಿಂದ ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.</p>.<p>ಬದುಕಿದರೂ ಜೀವಂತ ಶವವಾಗಿರುತ್ತಾಳೆ ಎಂದು ತಿಳಿದ ಕವನಾಳ ತಾಯಿ, ಸಹೋದರಿ, ಸೋದರಮಾವ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಭಾನುವಾರ ಅಂತ್ಯಸಂಸ್ಕಾರ ಹಳ್ಳೂರಿನಲ್ಲಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>