ಶಿಡೇನೂರು ಗ್ರಾಮದಲ್ಲಿ 29 ಕುಟುಂಬಗಳು ಅಕ್ರಮ– ಸಕ್ರಮ ಯೋಜನೆಯಡಿ ತಲಾ 1.15 ಗುಂಟೆ ಜಮೀನು ಪಡೆದುಕೊಂಡು, ಸಾಗುವಳಿ ಮಾಡಿಕೊಂಡಿದ್ದವು. ಈ ಕುಟುಂಬಗಳು ತಲಾ 15 ಗುಂಟೆ ಜಮೀನು ಬಿಟ್ಟುಕೊಡುವಂತೆ ಶಾಸಕ ನೆಹರು ಓಲೇಕಾರ ಹಾಗೂ ಅವರ ಮಗ ಮಂಜುನಾಥ ಓಲೇಕಾರ ಒತ್ತಾಯಿಸುತ್ತಿದ್ದಾರೆ. ಜಮೀನು ಬಿಟ್ಟುಕೊಡಲು ನಿರಾಕರಿಸಿದ್ದಕ್ಕೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ದು, ಬಿತ್ತನೆಗೆ ಯಾರೂ ಬರದಂತೆ ತಾಕೀತು ಮಾಡಿದ್ದಾರೆ ಎಂದು ಕೆಲ ರೈತರು ಆರೋಪಿಸಿದ್ದಾರೆ.