ಹನುಮನಹಳ್ಳಿ ಗ್ರಾಮದ ಸುರೇಶ ಪೂಜಾರ ಅವರು 2 ಎಕರೆ ಜಮೀನಿನಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಮೆಣಸಿನಕಾಯಿ ಬೆಳೆದಿದ್ದರು. ದೇಶದಾದ್ಯಂತ ಲಾಕ್ಡೌನಿಂದಾಗಿ ಮೆಣಸಿನಕಾಯಿಗೆ ಉತ್ತಮ ಬೆಲೆ ಸಿಗಲಿಲ್ಲ. ಕ್ವಿಂಟಲ್ಗೆ ₹800 ದರವಿದ್ದು, ಮೆಣಸಿನಕಾಯಿ ಬಿಡಿಸಲು ಕೂಲಿ ಕಾರ್ಮಿಕರಿಗೆ ಕೊಡುವ ಖರ್ಚೂ ಹುಟ್ಟುವುದಿಲ್ಲ ಎಂದು ಬೆಳೆಯನ್ನು ಬೇಸರದಿಂದ ನಾಶ ಮಾಡಿದ್ದಾರೆ.