<p><strong>ಬ್ಯಾಡಗಿ:</strong> ತಾಲ್ಲೂಕಿನ ಗುಡ್ಡದ ಮಲ್ಲಾಪುರ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದು ಕೃಷಿ ಕಾರ್ಮಿಕ ಗದಿಗೆಪ್ಪ ಮಲ್ಲಪ್ಪ ಕೊಪ್ಪದ (65) ಎಂಬುವವರು ಮೃತಪಟ್ಟಿದ್ದಾರೆ.</p>.<p>‘ಗುಡ್ಡದ ಮಲ್ಲಾಪುರದ ನಿವಾಸಿ ಗದಿಗೆಪ್ಪ, ಗ್ರಾಮದಲ್ಲಿರುವ ಹುಚ್ಚಯ್ಯಸ್ವಾಮಿ ದಾಸೋಹ ಮಠದಲ್ಲಿರುವ ದನಗಳ ಆರೈಕೆ ಮಾಡುತ್ತಿದ್ದರು. ಇವರ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಕಾಗಿನೆಲೆ ಠಾಣೆ ಪೊಲೀಸರು ತಿಳಿಸಿದರು.</p>.<p>‘ಗದಿಗೆಪ್ಪ ಅವರು ಸುಮಾರು 25 ವರ್ಷಗಳಿಂದ ಮಠದಲ್ಲಿ ಕೆಲಸ ಮಾಡುತ್ತಿದ್ದರು. ಜಾನುವಾರುಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಅವರದ್ದಾಗಿತ್ತು. ಶನಿವಾರ (ಜುಲೈ 17) ಸಂಜೆ ಎಂದಿನಂತೆ ದನದ ಕೊಟ್ಟಿಗೆಯಲ್ಲಿ ಗದಿಗೆಪ್ಪ ಅವರು ಕೆಲಸ ಮಾಡುತ್ತಿದ್ದರು.’</p>.<p>‘ಗುಡ್ಡದ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಬಿಡುವು ನೀಡುತ್ತಲೇ ಮಳೆ ಸುರಿಯುತ್ತಿದೆ. ಈ ಮಳೆಯಿಂದಾಗಿ ಗೋಡೆ ಶಿಥಿಲಗೊಂಡಿತ್ತು. ಶನಿವಾರ ಏಕಾಏಕಿ ಕುಸಿದ ಗೋಡೆ, ಗದಿಗೆಪ್ಪ ಹಾಗೂ ಆಕಳುಗಳ ಮೇಲೆ ಬಿದ್ದಿತ್ತು. ಅವಶೇಷಗಳಡಿ ಸಿಲುಕಿ ತೀವ್ರ ಗಾಯಗೊಂಡಿದ್ದ ಗದಿಗೆಪ್ಪ ಅವರನ್ನು ಸ್ಥಳೀಯರೇ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಗದಿಗೆಪ್ಪ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಮಾಹಿತಿ ನೀಡಿದರು.</p>.<p class="Subhead">₹ 5 ಲಕ್ಷ ಪರಿಹಾರದ ಆದೇಶ ಪ್ರತಿ: ಗೋಡೆ ಕುಸಿದು ಮೃತಪಟ್ಟ ಗದಿಗೆಪ್ಪ ಅವರ ಅವಲಂಬಿತರಿಗೆ ₹ 5 ಲಕ್ಷ ಪರಿಹಾರ ಘೋಷಿಸಲಾಗಿದ್ದು, ಇದರ ಆದೇಶ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಭಾನುವಾರ ವಿತರಿಸಿದರು.</p>.<p>ಪ್ರತಿ ವಿತರಿಸಿ ಮಾತನಾಡಿದ ಸಚಿವ, ‘ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುವ ಜನರು ಜಾಗೃತಿಯಿಂದ ಇರಬೇಕು‘ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ತಾಲ್ಲೂಕಿನ ಗುಡ್ಡದ ಮಲ್ಲಾಪುರ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದು ಕೃಷಿ ಕಾರ್ಮಿಕ ಗದಿಗೆಪ್ಪ ಮಲ್ಲಪ್ಪ ಕೊಪ್ಪದ (65) ಎಂಬುವವರು ಮೃತಪಟ್ಟಿದ್ದಾರೆ.</p>.<p>‘ಗುಡ್ಡದ ಮಲ್ಲಾಪುರದ ನಿವಾಸಿ ಗದಿಗೆಪ್ಪ, ಗ್ರಾಮದಲ್ಲಿರುವ ಹುಚ್ಚಯ್ಯಸ್ವಾಮಿ ದಾಸೋಹ ಮಠದಲ್ಲಿರುವ ದನಗಳ ಆರೈಕೆ ಮಾಡುತ್ತಿದ್ದರು. ಇವರ ಸಾವಿನ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಕಾಗಿನೆಲೆ ಠಾಣೆ ಪೊಲೀಸರು ತಿಳಿಸಿದರು.</p>.<p>‘ಗದಿಗೆಪ್ಪ ಅವರು ಸುಮಾರು 25 ವರ್ಷಗಳಿಂದ ಮಠದಲ್ಲಿ ಕೆಲಸ ಮಾಡುತ್ತಿದ್ದರು. ಜಾನುವಾರುಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಅವರದ್ದಾಗಿತ್ತು. ಶನಿವಾರ (ಜುಲೈ 17) ಸಂಜೆ ಎಂದಿನಂತೆ ದನದ ಕೊಟ್ಟಿಗೆಯಲ್ಲಿ ಗದಿಗೆಪ್ಪ ಅವರು ಕೆಲಸ ಮಾಡುತ್ತಿದ್ದರು.’</p>.<p>‘ಗುಡ್ಡದ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಬಿಡುವು ನೀಡುತ್ತಲೇ ಮಳೆ ಸುರಿಯುತ್ತಿದೆ. ಈ ಮಳೆಯಿಂದಾಗಿ ಗೋಡೆ ಶಿಥಿಲಗೊಂಡಿತ್ತು. ಶನಿವಾರ ಏಕಾಏಕಿ ಕುಸಿದ ಗೋಡೆ, ಗದಿಗೆಪ್ಪ ಹಾಗೂ ಆಕಳುಗಳ ಮೇಲೆ ಬಿದ್ದಿತ್ತು. ಅವಶೇಷಗಳಡಿ ಸಿಲುಕಿ ತೀವ್ರ ಗಾಯಗೊಂಡಿದ್ದ ಗದಿಗೆಪ್ಪ ಅವರನ್ನು ಸ್ಥಳೀಯರೇ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಗದಿಗೆಪ್ಪ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಮಾಹಿತಿ ನೀಡಿದರು.</p>.<p class="Subhead">₹ 5 ಲಕ್ಷ ಪರಿಹಾರದ ಆದೇಶ ಪ್ರತಿ: ಗೋಡೆ ಕುಸಿದು ಮೃತಪಟ್ಟ ಗದಿಗೆಪ್ಪ ಅವರ ಅವಲಂಬಿತರಿಗೆ ₹ 5 ಲಕ್ಷ ಪರಿಹಾರ ಘೋಷಿಸಲಾಗಿದ್ದು, ಇದರ ಆದೇಶ ಪ್ರತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಭಾನುವಾರ ವಿತರಿಸಿದರು.</p>.<p>ಪ್ರತಿ ವಿತರಿಸಿ ಮಾತನಾಡಿದ ಸಚಿವ, ‘ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುವ ಜನರು ಜಾಗೃತಿಯಿಂದ ಇರಬೇಕು‘ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>