<p><strong>ಹಿರೇಕೆರೂರು</strong>: ‘50 ವರ್ಷಗಳ ಹಿಂದೆ ಕಡಿಮೆ ಖರ್ಚಿನಲ್ಲಿ ಕೃಷಿಕರ ಬದುಕು ಸಾಗುತ್ತಿತ್ತು. ಹೈಬ್ರಿಡ್ ಕೃಷಿ ಆರಂಭವಾದಾಗಿನಿಂದ ಕೃಷಿಯ ಖರ್ಚು ಹೆಚ್ಚಾಗಿ, ರೈತರ ಸಾಲ ದ್ವಿಗುಣವಾಗುತ್ತಿದೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೆರ ಹೇಳಿದರು.</p>.<p>ಹಾವೇರಿ ಜಿಲ್ಲೆಯ 14ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶುಕ್ರವಾರ ನಡೆದ ‘ಹೊನ್ನ ಬಿತ್ತೇವು ಜಗಕೆಲ್ಲʼ ವಿಚಾರ ಗೋಷ್ಠಿಯಲ್ಲಿ ಅವರು, ರೈತರ ಸಮಸ್ಯೆಗಳನ್ನು ತೆರೆದಿಟ್ಟು ಪರಿಹಾರಕ್ಕಾಗಿ ಆಗ್ರಹಿಸಿದರು.</p>.<p>‘ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳಿಂದ ಕೃಷಿಯ ಖರ್ಚು ಹೆಚ್ಚಾಗಿದೆ. ದೇಶದ ರಾಜಕೀಯ ಪಕ್ಷಗಳು, ರೈತರನ್ನು ಕಡೆಗಣಿಸಿವೆ. ಉದ್ದಿಮೆದಾರರ ಸಾಲಗಳನ್ನು ಮನ್ನಾ ಮಾಡುತ್ತಿರುವ ಸರ್ಕಾರಗಳು, ರೈತರ ಸಾಲವನ್ನು ಮನ್ನಾ ಮಾಡುತ್ತಿಲ್ಲ. ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಸಮಾಜದ ಎಲ್ಲ ರಂಗಗಳಿಗಿಂತಲೂ ಕೃಷಿರಂಗ, ದೇಶದ ಅಸ್ಥಿತ್ವವನ್ನು ನಿರ್ಧಾರ ಮಾಡುವ ರಂಗವಾಗಿದೆ. ಆದರೆ, ಇಂದು ರೈತರು ಬೆಳೆದ ಬೆಳೆಗಳು ಮಳೆಯ ಏರಿಳಿತಕ್ಕೆ ಸಿಲುಕಿ ಹಾನಿಯಾಗುತ್ತಿದೆ. ರೈತರು ಸಾಲದ ಸುಳಿಯಿಂದ ಬದುಕುವ ಆಸೆಯನ್ನೇ ಕಳೆದುಕೊಳ್ಳುವ ಹಂತಕ್ಕೆ ಬರುತ್ತಿದ್ದಾರೆ’ ಎಂದು ಹೇಳಿದರು.</p>.<p>ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ ಮಾತನಾಡಿ, ‘ಕನ್ನಡ ನಾಡು-ನುಡಿ ಉಳಿವಿಗಾಗಿ ಇಂದು ಹೋರಾಟಗಳು ನಡೆಯುತ್ತಿದೆ. ಆದರೆ, ನಾವು ನಮ್ಮತನವನ್ನು ಬಿಟ್ಟು ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗುತ್ತಿದ್ದೇವೆ. ದೇಶಕ್ಕೆ ಅನ್ನ ನೀಡುವ ರೈತ ಸಹ ಸಂಕಷ್ಟಕ್ಕೆ ಸಿಲುಕಿದ್ದಾನೆ. ರೈತನ ಬದುಕಿನ ದುಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯಗಳು ನಡೆಯಬೇಕಿದೆ’ ಎಂದರು.</p>.<p>ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ, ‘ರೈತರು ಹಾಗೂ ರೈತರ ಮಕ್ಕಳಿಗೆ ಕನ್ಯೆ ಸಿಗುತ್ತಿಲ್ಲ. ಇದರಿಂದಾಗಿ ಜೀವನಪೂರ್ತಿ ಬ್ರಹ್ಮಚಾರಿಯಾಗಿ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>‘ಕೃಷಿಯು ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ತಾನು ಬೆಳೆದ ಬೆಳೆಗೆ ದಲ್ಲಾಳಿಗಳು ಬೆಲೆ ನಿಗದಿ ಮಾಡುವ ಪದ್ದತಿಯಿಂದ ರೈತ ಹೈರಾಣಾಗಿ, ಆತ್ಮಹತ್ಯೆಯಂಥ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದಾನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರು</strong>: ‘50 ವರ್ಷಗಳ ಹಿಂದೆ ಕಡಿಮೆ ಖರ್ಚಿನಲ್ಲಿ ಕೃಷಿಕರ ಬದುಕು ಸಾಗುತ್ತಿತ್ತು. ಹೈಬ್ರಿಡ್ ಕೃಷಿ ಆರಂಭವಾದಾಗಿನಿಂದ ಕೃಷಿಯ ಖರ್ಚು ಹೆಚ್ಚಾಗಿ, ರೈತರ ಸಾಲ ದ್ವಿಗುಣವಾಗುತ್ತಿದೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೆರ ಹೇಳಿದರು.</p>.<p>ಹಾವೇರಿ ಜಿಲ್ಲೆಯ 14ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶುಕ್ರವಾರ ನಡೆದ ‘ಹೊನ್ನ ಬಿತ್ತೇವು ಜಗಕೆಲ್ಲʼ ವಿಚಾರ ಗೋಷ್ಠಿಯಲ್ಲಿ ಅವರು, ರೈತರ ಸಮಸ್ಯೆಗಳನ್ನು ತೆರೆದಿಟ್ಟು ಪರಿಹಾರಕ್ಕಾಗಿ ಆಗ್ರಹಿಸಿದರು.</p>.<p>‘ಕಳಪೆ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳಿಂದ ಕೃಷಿಯ ಖರ್ಚು ಹೆಚ್ಚಾಗಿದೆ. ದೇಶದ ರಾಜಕೀಯ ಪಕ್ಷಗಳು, ರೈತರನ್ನು ಕಡೆಗಣಿಸಿವೆ. ಉದ್ದಿಮೆದಾರರ ಸಾಲಗಳನ್ನು ಮನ್ನಾ ಮಾಡುತ್ತಿರುವ ಸರ್ಕಾರಗಳು, ರೈತರ ಸಾಲವನ್ನು ಮನ್ನಾ ಮಾಡುತ್ತಿಲ್ಲ. ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ತಿಳಿಸಿದರು.</p>.<p>‘ಸಮಾಜದ ಎಲ್ಲ ರಂಗಗಳಿಗಿಂತಲೂ ಕೃಷಿರಂಗ, ದೇಶದ ಅಸ್ಥಿತ್ವವನ್ನು ನಿರ್ಧಾರ ಮಾಡುವ ರಂಗವಾಗಿದೆ. ಆದರೆ, ಇಂದು ರೈತರು ಬೆಳೆದ ಬೆಳೆಗಳು ಮಳೆಯ ಏರಿಳಿತಕ್ಕೆ ಸಿಲುಕಿ ಹಾನಿಯಾಗುತ್ತಿದೆ. ರೈತರು ಸಾಲದ ಸುಳಿಯಿಂದ ಬದುಕುವ ಆಸೆಯನ್ನೇ ಕಳೆದುಕೊಳ್ಳುವ ಹಂತಕ್ಕೆ ಬರುತ್ತಿದ್ದಾರೆ’ ಎಂದು ಹೇಳಿದರು.</p>.<p>ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ ಮಾತನಾಡಿ, ‘ಕನ್ನಡ ನಾಡು-ನುಡಿ ಉಳಿವಿಗಾಗಿ ಇಂದು ಹೋರಾಟಗಳು ನಡೆಯುತ್ತಿದೆ. ಆದರೆ, ನಾವು ನಮ್ಮತನವನ್ನು ಬಿಟ್ಟು ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗುತ್ತಿದ್ದೇವೆ. ದೇಶಕ್ಕೆ ಅನ್ನ ನೀಡುವ ರೈತ ಸಹ ಸಂಕಷ್ಟಕ್ಕೆ ಸಿಲುಕಿದ್ದಾನೆ. ರೈತನ ಬದುಕಿನ ದುಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ಕಾರ್ಯಗಳು ನಡೆಯಬೇಕಿದೆ’ ಎಂದರು.</p>.<p>ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ, ‘ರೈತರು ಹಾಗೂ ರೈತರ ಮಕ್ಕಳಿಗೆ ಕನ್ಯೆ ಸಿಗುತ್ತಿಲ್ಲ. ಇದರಿಂದಾಗಿ ಜೀವನಪೂರ್ತಿ ಬ್ರಹ್ಮಚಾರಿಯಾಗಿ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>‘ಕೃಷಿಯು ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ತಾನು ಬೆಳೆದ ಬೆಳೆಗೆ ದಲ್ಲಾಳಿಗಳು ಬೆಲೆ ನಿಗದಿ ಮಾಡುವ ಪದ್ದತಿಯಿಂದ ರೈತ ಹೈರಾಣಾಗಿ, ಆತ್ಮಹತ್ಯೆಯಂಥ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದಾನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>