ರೈತ ಮುಖಂಡ ಬಿ.ಕೆ. ರಾಜನಹಳ್ಳಿ ಮಾತನಾಡಿ, ಇಲ್ಲಿನ ಎಪಿಎಂಸಿ ಮಾರುಕಟ್ಟೆಗೆ ಒಳಪಟ್ಟು ಹೆಚ್ಚಿನ ವಹಿವಾಟು ಹೊಂದಿರುವ ಮಾರುಕಟ್ಟೆಯಲ್ಲಿ ಪ್ರತಿ ದಿನವೂ ವೀಳ್ಯೆದೆಲೆ, ಈರುಳ್ಳಿ ಮತ್ತು ಬೆಳ್ಳುಳ್ಳಿ ವ್ಯಾಪಾರವು ನಡೆಯುತ್ತದೆ. ಇಲ್ಲಿ ವ್ಯಾಪಾರಸ್ಥರು ತಮ್ಮ ವ್ಯಾಪಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಸುತ್ತಲೂ ಬಿದಿರಿನ ತಟ್ಟಿ ಹಾಕಿಕೊಂಡಿದ್ದಾರೆ. ಇದರಿಂದ ಮಾರುಕಟ್ಟೆಗೆ ಬರುವ ರೈತರಿಗೆ ತೊಂದರೆಯಾಗುತ್ತಿದೆ ಎಂದರು.