ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಣುಕಾಚಾರ್ಯ ವಿರುದ್ಧ ರೈತರ ಆಕ್ರೋಶ

Last Updated 19 ಡಿಸೆಂಬರ್ 2020, 12:57 IST
ಅಕ್ಷರ ಗಾತ್ರ

ಹಾವೇರಿ: ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಮನೆ ನಿರ್ಮಿಸಿಕೊಡುತ್ತೇನೆ ಎಂದು ಕೋಡಿಹಳ್ಳಿಯವರು ಜನರಿಂದ ಹಣ ವಸೂಲಿ ಮಾಡಿ, ವಂಚಿಸಿದ್ದಾರೆ. ಅವರೊಬ್ಬ ನಕಲಿ ರೈತ ನಾಯಕ ಎಂದು ಸುಳ್ಳು ಆರೋಪವನ್ನು ರೇಣುಕಾಚಾರ್ಯ ಮಾಡಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಸುಳ್ಳು ಹೇಳಿಕೆಗಳನ್ನು ವಾಪಸ್‌ ಪಡೆಯಬೇಕು ಮತ್ತು ಕೂಡಲೇ ಕೋಡಿಹಳ್ಳಿಯವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ರಾಜೇಸಾಬ್‌ ತರ್ಲಘಟ್ಟ, ಈರಪ್ಪ ಮುದಿಯಪ್ಪನವರ, ಚನ್ನಪ್ಪ ಮರಡೂರ, ರುದ್ರಪ್ಪ ಬಳಿಗಾರ, ಬಸವಂತಪ್ಪ ಮೆಳ್ಳಳ್ಳಿ, ಜಗದೀಶ ಪಾಟೀಲ, ಶೇಖಪ್ಪ ಅಲಸೂರ, ಮೌಲಾಸಾಬ್‌ ಜಾತಗೇರ, ಮಲ್ಲೇಶಪ್ಪ ಅಂಗಡಿ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT