ಮೆಕ್ಕೆಜೋಳ ಬೆಳೆದ ರೈತರಿಗೆ ₹5 ಸಾವಿರ ಪ್ರೋತ್ಸಾಹಧನ ಎಲ್ಲ ರೈತರಿಗೂ ತಲುಪಿಲ್ಲ. ಬೆಳೆ ವಿಮೆಯ ತಾರತಮ್ಯವನ್ನು ಸರಿಪಡಿಸಿಲ್ಲ. ಹಾಲಿನ ಸಹಾಯಧನ ಸಮರ್ಪಕವಾಗಿ ವಿತರಣೆಯಾಗಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕದೆ ರೈತ ವಿರೋಧ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಜುಲೈ 21ರಂದು ಬೆಳಿಗ್ಗೆ 11 ಗಂಟೆಗೆ ಕಾಗಿನೆಲೆ ಕ್ರಾಸ್ನಿಂದ ಸಿದ್ದಪ್ಪ ವೃತ್ತದವರೆಗೆ ಪ್ರತಿಭಟನೆ ನಡೆಸಿ, ಸಾಂಕೇತಿಕ ರಸ್ತೆ ತಡೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.