ಅತಿವೃಷ್ಟಿ, ಬರಗಾಲ, ಬೆಳೆನಷ್ಟ, ದರ ಕುಸಿತ, ವಿದ್ಯುತ್ ಸಮಸ್ಯೆ ಮುಂತಾದ ಕಾರಣಗಳಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಹಾಕಿದ ಬಂಡವಾಳವೂ ಕೈ ಸೇರದೆ ಹತಾಶ ಸ್ಥಿತಿ ತಲುಪಿ, ಸಾಲ ತೀರಿಸಲು ಸಾಧ್ಯವಾಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈಗಾಗಲೇ ದೇಶದಲ್ಲಿ 7 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಆತ್ಮಹತ್ಯೆ ಅಲ್ಲ, ಸರ್ಕಾರ ಮಾಡಿದ ಕೊಲೆ ಎಂದು ಟೀಕಿಸಿದ್ದಾರೆ.