ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಹಿರಿತನದ ಆಧಾರದ ಮೇಲೆ ಅನಾಯಾಸವಾಗಿ ಸಚಿವರಾಗಬಹುದಿತ್ತು. ಆದರೆ ಜಿಲ್ಲೆಯಲ್ಲಿ ಈಗಾಗಲೇ ಇಬ್ಬರು ಸಚಿವರಿದ್ದು, ಮಾತು ಕೊಟ್ಟಂತೆ ಆರ್. ಶಂಕರ್ ಅವರಿಗೂ ಮಂತ್ರಿ ಮಾಡಲೇಬೇಕಾಗಿದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದಾಗಿ ಸಚಿವ ಸ್ಥಾನ ಬಿಟ್ಟುಕೊಟ್ಟು, ಪಕ್ಷ ಹಾಗೂ ಮುಖ್ಯಮಂತ್ರಿ ಸೂಚಿಸಿದ ನಿಗಮವನ್ನು ವಹಿಸಿಕೊಂಡಿರುವುದು ಅವರ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ’ ಓಲೇಕಾರ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.