ಸೀಲ್ಡೌನ್ ಪ್ರದೇಶದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಲು, ತರಕಾರಿ, ಹಾಗೂ ದಿನಸಿ ಸಾಮಗ್ರಿಗಳನ್ನು ಜಿಲ್ಲಾಡಳಿತದಿಂದಲೇ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಸವಣೂರು ಪಟ್ಟಣವನ್ನು ಬಫರ್ ಝೋನ್ ಎಂದು ಗುರುತಿಸಲಾಗಿದ್ದು, ಸವಣೂರು ನಗರ ಪ್ರದೇಶದಲ್ಲಿ ವ್ಯಾಪಾರ, ವ್ಯವಹಾರ ವಹಿವಾಟುಗಳನ್ನು ನಿರ್ವಹಿಸದಂತೆ ಸೂಚಿಸಲಾಗಿದೆ.ಅಲ್ಲಿಯೇ ಕಂಟ್ರೋಲ್ ರೂಂ ಸಹ ತೆರೆಯಲಾಗಿರುತ್ತದೆ. ಆದ್ದರಿಂದ ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಮನವರಿಕೆ ಮಾಡಿ ಜಿಲ್ಲಾಡಳಿತಕ್ಕೆ ತೀವ್ರ ಕಟ್ಟುನಿಟ್ಟಿನ ಕ್ರಮವನ್ನು ಜರುಗಿಸಲು ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.