<p>ಶಿಗ್ಗಾವಿ: ಬೆಳೆ ವಿಮೆ ತುಂಬುವ ಸಲುವಾಗಿ ಎಫ್.ಐ.ಡಿ ನಂಬರ್ ಜೋಡಿಸಲು ರೈತರು ತಾಲ್ಲೂಕಿನ ಬಂಕಾಪುರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಮುಂದೆ ಮಂಗಳವಾರ ಮಳೆಯನ್ನೂ ಲೆಕ್ಕಿಸದೆ ಸರತಿಯಲ್ಲಿ ನಿಂತಿದ್ದರು.</p>.<p>ರೈತರ ಎಫ್.ಐ.ಡಿ ನಂಬರ್ ತಾಂತ್ರಿಕ ದೋಷ ಸರಿಪಡಿಸಿ, ನಿಗದಿ ಅವಧಿಯಲ್ಲಿ ಬೆಳೆ ವಿಮೆ ತುಂಬಲು ಅವಕಾಶ ಕಲ್ಪಿಸಬೇಕು ಎಂದು ರೈತ ಮುಖಂಡರು ತಹಶೀಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಈ ವರೆಗೆ ಪ್ರಯೋಜನವಾಗಿಲ್ಲ.</p>.<p>ಸರ್ವರ್ ಸಮಸ್ಯೆಯಿಂದ ರೈತ ಸಂಪರ್ಕ ಕೇಂದ್ರದ ಮುಂದೆ ರೈತರು ಎರಡ್ಮೂರು ದಿನಗಳ ವರೆಗೆ ಸರತಿಯಲ್ಲಿ ನಿಲ್ಲುವಂತಾಗಿದೆ. ಈ ನಂಬರ್ ಇಲ್ಲದೆ ಬೆಳೆ ವಿಮೆ ತುಂಬಲು ಸಾಧ್ಯವಿಲ್ಲ. ತಪ್ಪಾಗಿ ನಮೂದು ಮಾಡಿರುವ ನಂಬರನ್ನು ತಿದ್ದುಪಡಿ ಮಾಡಿ, ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಜುಲೈ 31 ಬೆಳೆ ವಿಮೆ ತುಂಬಲು ಕೊನೆ ದಿನವಾಗಿದೆ. ಆದರೆ ತಪ್ಪಾಗಿರುವ ನಂಬರ್ ಸರಿಪಡಿಸಲು ಕನಿಷ್ಟ ಮೂರು ದಿನ ಬೇಕು ಎಂದು ಹೇಳುತ್ತಿದ್ದಾರೆ. ಹಾಗಾಗಿ ಬೆಳೆ ವಿಮೆ ತುಂಬುವ ಅವಧಿಯನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರೈತ ಸಂಘದ ಬಂಕಾಪುರ ಘಟಕದ ಅಧ್ಯಕ್ಷ ದೇವೇಂದ್ರಪ್ಪ ಹಳವಳ್ಳಿ, ಬಸವರಾಜ ಮಲ್ಲೂರ, ಮಂಜುನಾಥ ಸವೂರ, ಸುರೇಶ ಸಡಗರವಳ್ಳಿ, ಚಿಕ್ಕನಗೌಡ್ರ ಪಾಟೀಲ, ಮಾಲತೇಶ ಕುರಿ, ಮಾಲತೇಶ ಸಕ್ರಿ, ಅಶೋಕ ಹಳವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ಬೆಳೆ ವಿಮೆ ತುಂಬುವ ಸಲುವಾಗಿ ಎಫ್.ಐ.ಡಿ ನಂಬರ್ ಜೋಡಿಸಲು ರೈತರು ತಾಲ್ಲೂಕಿನ ಬಂಕಾಪುರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಮುಂದೆ ಮಂಗಳವಾರ ಮಳೆಯನ್ನೂ ಲೆಕ್ಕಿಸದೆ ಸರತಿಯಲ್ಲಿ ನಿಂತಿದ್ದರು.</p>.<p>ರೈತರ ಎಫ್.ಐ.ಡಿ ನಂಬರ್ ತಾಂತ್ರಿಕ ದೋಷ ಸರಿಪಡಿಸಿ, ನಿಗದಿ ಅವಧಿಯಲ್ಲಿ ಬೆಳೆ ವಿಮೆ ತುಂಬಲು ಅವಕಾಶ ಕಲ್ಪಿಸಬೇಕು ಎಂದು ರೈತ ಮುಖಂಡರು ತಹಶೀಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಈ ವರೆಗೆ ಪ್ರಯೋಜನವಾಗಿಲ್ಲ.</p>.<p>ಸರ್ವರ್ ಸಮಸ್ಯೆಯಿಂದ ರೈತ ಸಂಪರ್ಕ ಕೇಂದ್ರದ ಮುಂದೆ ರೈತರು ಎರಡ್ಮೂರು ದಿನಗಳ ವರೆಗೆ ಸರತಿಯಲ್ಲಿ ನಿಲ್ಲುವಂತಾಗಿದೆ. ಈ ನಂಬರ್ ಇಲ್ಲದೆ ಬೆಳೆ ವಿಮೆ ತುಂಬಲು ಸಾಧ್ಯವಿಲ್ಲ. ತಪ್ಪಾಗಿ ನಮೂದು ಮಾಡಿರುವ ನಂಬರನ್ನು ತಿದ್ದುಪಡಿ ಮಾಡಿ, ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>ಜುಲೈ 31 ಬೆಳೆ ವಿಮೆ ತುಂಬಲು ಕೊನೆ ದಿನವಾಗಿದೆ. ಆದರೆ ತಪ್ಪಾಗಿರುವ ನಂಬರ್ ಸರಿಪಡಿಸಲು ಕನಿಷ್ಟ ಮೂರು ದಿನ ಬೇಕು ಎಂದು ಹೇಳುತ್ತಿದ್ದಾರೆ. ಹಾಗಾಗಿ ಬೆಳೆ ವಿಮೆ ತುಂಬುವ ಅವಧಿಯನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ರೈತ ಸಂಘದ ಬಂಕಾಪುರ ಘಟಕದ ಅಧ್ಯಕ್ಷ ದೇವೇಂದ್ರಪ್ಪ ಹಳವಳ್ಳಿ, ಬಸವರಾಜ ಮಲ್ಲೂರ, ಮಂಜುನಾಥ ಸವೂರ, ಸುರೇಶ ಸಡಗರವಳ್ಳಿ, ಚಿಕ್ಕನಗೌಡ್ರ ಪಾಟೀಲ, ಮಾಲತೇಶ ಕುರಿ, ಮಾಲತೇಶ ಸಕ್ರಿ, ಅಶೋಕ ಹಳವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>