ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಕಣದಲ್ಲಿ ಮಾತ್ರ ಜಿದ್ದಾಜಿದ್ದಿ: ಮನೋಹರ ತಹಶೀಲ್ದಾರ್

ಮಾಜಿ ಸಚಿವ ಮನೋಹರ ತಹಶೀಲ್ದಾರ್‌ ಹೇಳಿಕೆ
Last Updated 9 ಜೂನ್ 2021, 16:16 IST
ಅಕ್ಷರ ಗಾತ್ರ

ಹಾವೇರಿ: ‘ಸಿ.ಎಂ. ಉದಾಸಿ ಮತ್ತು ನಾನು ಸತತ ಎಂಟು ಬಾರಿ ಚುನಾವಣಾ ಕಣದಲ್ಲಿ ಪ್ರತಿಸ್ಪರ್ಧೆ ಮಾಡಿದ್ದೇವೆ. ಸೋಲು–ಗೆಲುವನ್ನು ಇಬ್ಬರೂ ಕಂಡಿದ್ದೇವೆ. ನಮ್ಮ ಜಿದ್ದಾಜಿದ್ದಿ ಚುನಾವಣಾ ಕಣದಲ್ಲಿ ಮಾತ್ರ ಇತ್ತು. ವೈಯಕ್ತಿಕವಾಗಿ ಇಬ್ಬರ ನಡುವೆ ಯಾವುದೇ ದ್ವೇಷ ಇರಲಿಲ್ಲ’ ಎಂದು ಮಾಜಿ ಸಚಿವ ಮನೋಹರ ತಹಶೀಲ್ದಾರ್‌ ಹೇಳಿದರು.

ಹಾನಗಲ್‌ನಲ್ಲಿ ಸಿ.ಎಂ. ಉದಾಸಿ ಅವರ ಅಂತಿಮ ದರ್ಶನ ಪಡೆದ ನಂತರ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, 1978ರ ಚುನಾವಣೆಯಲ್ಲಿ ಇಬ್ಬರೂ ಒಟ್ಟಿಗೆ ಇದ್ದೆವು. ನಂತರ ರಾಜಕೀಯ ಸ್ಥಿತ್ಯಂತರವಾದಾಗ ಬೇರೆ ಆಗಿ ಪರಸ್ಪರ ಎದುರಾಳಿಗಳಾದೆವು. ಎಂಟು ಬಾರಿ ಚುನಾವಣಾ ಕಣದಲ್ಲಿ ಸ್ಪರ್ಧೆ ಮಾಡಿದ್ದೇವೆ. ತಾಲ್ಲೂಕಿನ ಅಭಿವೃದ್ಧಿಗಾಗಿ ಹೋರಾಟ ಮಾಡಿದ್ದೇವೆ, ವೈಯಕ್ತಿಕವಾಗಿ ಚೆನ್ನಾಗಿಯೇ ಇದ್ದೆವು ಎಂದು ತಿಳಿಸಿದರು.

‘1978ರಿಂದ ನಾನು ಅವರ ಮನೆಗೆ ಹೋಗಿಯೇ ಇರಲಿಲ್ಲ. ಉದಾಸಿ ಅವರ ಆರೋಗ್ಯ ಹದಗೆಟ್ಟಿದೆ ಎಂದಾಗ ತಡೆದುಕೊಳ್ಳಲು ಆಗಲಿಲ್ಲ.ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದೆ. ಅಂದು ಗೆಳೆಯನಂತೆ ಟೀ ಕುಡಿಯೋವರೆಗೂ ಬಿಡಲಿಲ್ಲ. ಇನ್ನು ಮುಂದೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳೋಣ ಎಂದು ಹೇಳಿದ್ದರು’ ಎಂದು ನೆನಪುಗಳನ್ನು ಹಂಚಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT