ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಣೆಬೆನ್ನೂರು ಮತ್ತು ಹಿರೇಕೆರೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿಮತದಾರರಿಗೆ ಆಮಿಷವೊಡ್ಡುವ ರೀತಿಯಲ್ಲಿ ಆಶ್ವಾಸನೆ, ಭರವಸೆ, ಹೇಳಿಕೆಗಳನ್ನು ನೀಡಿದವರ ವಿರುದ್ಧ ಫ್ಲೈಯಿಂಗ್ ಸ್ಕ್ವಾಡ್ ದೂರು ನೀಡಿದೆ. ಅಧಿಕಾರಿಗಳ ವಿರುದ್ಧ ಸ್ವೀಕೃತವಾದ ಎರಡು ದೂರಗಳನ್ನು ಪರಿಶೀಲನೆ ಮಾಡಿ, ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.