<p><strong>ಹಾವೇರಿ: </strong>ತಾಲ್ಲೂಕಿನ ದೇವಗಿರಿ ಸಮೀಪದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಸಂಬಂಧ ನಿವೃತ್ತ ಪ್ರಾಂಶುಪಾಲ ಸೇರಿ 6 ಮಂದಿ ವಿರುದ್ಧ ನಗರದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.</p>.<p>ನಿವೃತ್ತ ಪ್ರಾಂಶು ಪಾಲ ಡಾ.ಕೆ.ಬಿ.ಪ್ರಕಾಶ್, ಕಚೇರಿ ಅಧೀಕ್ಷಕರಾದ ಎಚ್.ವಾಸುದೇವ, ಗುರಪ್ಪ ಸುಂಕದವರ, ಪ್ರಥಮದರ್ಜೆ ಸಹಾಯಕಿ ಜಯಮ್ಮ ಕಾಚೇರ, ದ್ವಿತೀಯ ದರ್ಜೆ ಸಹಾಯಕರಾದ ರವೀಂದ್ರಕುಮಾರ ಮತ್ತು ಅನಿಲಕುಮಾರ ಕಟಿಗಾರ ವಿರುದ್ಧ ಕಾಲೇಜಿನ ಹಾಲಿ ಪ್ರಾಂಶು ಪಾಲ ಡಾ.ಜಗದೀಶ ಕೋರಿ ದೂರು ನೀಡಿದ್ದಾರೆ.</p>.<p>‘2007 ಅ.1ರಿಂದ 2022 ಏಪ್ರಿಲ್ 30ರ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿ ಕೊಂಡು, ಕಾಲೇಜಿನ ಸರ್ಕಾರಿ ದಾಖಲೆಗಳನ್ನು ತಿದ್ದುಪಡಿ ಮಾಡಿದ್ದಾರೆ. ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ, ಸಿಸಿಟೆಕ್, ಸ್ಕಾಲರ್ಶಿಪ್, ವಿದ್ಯಾರ್ಥಿ ಶೈಕ್ಷಣಿಕ ಸಾಲದ ಹಣ ಸೇರಿ ದಂತೆ ಒಟ್ಟು ₹ 3.14 ಕೋಟಿಯನ್ನು ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಅವ್ಯವಹಾರ ಕುರಿತು<br />‘ವಿದ್ಯಾಸಿರಿ ಸ್ಕಾಲರ್ಶಿಪ್ಗೆ ಕನ್ನ!’ ಶೀರ್ಷಿಕೆ ಯಡಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾದ ನಂತರ ತಾಂತ್ರಿಕ ಶಿಕ್ಷಣ ಇಲಾಖೆ ಐವರು ಸರ್ಕಾರಿ ನೌಕರರನ್ನು ಅಮಾನತು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ತಾಲ್ಲೂಕಿನ ದೇವಗಿರಿ ಸಮೀಪದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಸಂಬಂಧ ನಿವೃತ್ತ ಪ್ರಾಂಶುಪಾಲ ಸೇರಿ 6 ಮಂದಿ ವಿರುದ್ಧ ನಗರದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.</p>.<p>ನಿವೃತ್ತ ಪ್ರಾಂಶು ಪಾಲ ಡಾ.ಕೆ.ಬಿ.ಪ್ರಕಾಶ್, ಕಚೇರಿ ಅಧೀಕ್ಷಕರಾದ ಎಚ್.ವಾಸುದೇವ, ಗುರಪ್ಪ ಸುಂಕದವರ, ಪ್ರಥಮದರ್ಜೆ ಸಹಾಯಕಿ ಜಯಮ್ಮ ಕಾಚೇರ, ದ್ವಿತೀಯ ದರ್ಜೆ ಸಹಾಯಕರಾದ ರವೀಂದ್ರಕುಮಾರ ಮತ್ತು ಅನಿಲಕುಮಾರ ಕಟಿಗಾರ ವಿರುದ್ಧ ಕಾಲೇಜಿನ ಹಾಲಿ ಪ್ರಾಂಶು ಪಾಲ ಡಾ.ಜಗದೀಶ ಕೋರಿ ದೂರು ನೀಡಿದ್ದಾರೆ.</p>.<p>‘2007 ಅ.1ರಿಂದ 2022 ಏಪ್ರಿಲ್ 30ರ ಅವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿ ಕೊಂಡು, ಕಾಲೇಜಿನ ಸರ್ಕಾರಿ ದಾಖಲೆಗಳನ್ನು ತಿದ್ದುಪಡಿ ಮಾಡಿದ್ದಾರೆ. ಪ್ರವೇಶ ಶುಲ್ಕ, ಪರೀಕ್ಷಾ ಶುಲ್ಕ, ಸಿಸಿಟೆಕ್, ಸ್ಕಾಲರ್ಶಿಪ್, ವಿದ್ಯಾರ್ಥಿ ಶೈಕ್ಷಣಿಕ ಸಾಲದ ಹಣ ಸೇರಿ ದಂತೆ ಒಟ್ಟು ₹ 3.14 ಕೋಟಿಯನ್ನು ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಅವ್ಯವಹಾರ ಕುರಿತು<br />‘ವಿದ್ಯಾಸಿರಿ ಸ್ಕಾಲರ್ಶಿಪ್ಗೆ ಕನ್ನ!’ ಶೀರ್ಷಿಕೆ ಯಡಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾದ ನಂತರ ತಾಂತ್ರಿಕ ಶಿಕ್ಷಣ ಇಲಾಖೆ ಐವರು ಸರ್ಕಾರಿ ನೌಕರರನ್ನು ಅಮಾನತು ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>