ಹಂಸಭಾವಿ: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ₹8 ಲಕ್ಷ ಮೌಲ್ಯದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಬೆಂಕಿಗೆ ಆಹುತಿಯಾದ ಮೆಕ್ಕೆಜೋಳದ ರಾಶಿ ಹಂಸಭಾವಿಯ ವಿರೂಪಾಕ್ಷಪ್ಪ ಕಲ್ಲತ್ತಿ ಎಂಬ ರೈತರಿಗೆ ಸೇರಿದ್ದಾಗಿದೆ. 15 ಎಕರೆ ಜಮೀನಿನಲ್ಲಿ ಬೆಳೆದು, ಒಕ್ಕಲು ಮಾಡಲು ಗ್ರಾಮದ ಹೊರವಲಯದಲ್ಲಿ ರಾಶಿ ಹಾಕಿದ್ದರು.
ರಸ್ತೆಯಲ್ಲಿ ಹೋಗುವ ವಾಹನ ಸವಾರರು ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರೂ ಭಾಗಶಃ ಸುಟ್ಟು ಕರಕಲಾಗಿದೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ ಐ ದೇವರಾಜ ತಿಳಿಸಿದ್ದಾರೆ.