<p><strong>ಹಾವೇರಿ:</strong> ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಅಂಗರಗಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಹಾಕಿದ್ದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿ ಅವಘಡ ಸಂಭವಿಸಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಅಂಗರಗಟ್ಟಿ ಗ್ರಾಮದ ನಿವಾಸಿ ನಾಗರಾಜ ಗುಡ್ಡಪ್ಪ ಹಾದಿಮನಿ ಎಂಬುವವರಿಗೆ ಸೇರಿದ್ದ ಮೆಕ್ಕೆಜೋಳದ ರಾಶಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದಾಗಿ ₹ 6.50 ಲಕ್ಷ ನಷ್ಟವಾಗಿದ್ದು, ನಾಗರಾಜ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಬ್ಯಾಡಗಿ ಪೊಲೀಸರು ಹೇಳಿದರು.</p>.<p>‘ರೈತ ನಾಗರಾಜ ಅವರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 12 ಎಕರೆ 37 ಗುಂಟೆಯಲ್ಲಿ ಮೆಕ್ಕೆಜೋಳ ಬೆಳೆ ಬೆಳೆದಿದ್ದರು. ಅದೇ ಬೆಳೆಯನ್ನು 8 ದಿನಗಳ ಹಿಂದೆಯಷ್ಟೇ ಕಟಾವು ಮಾಡಿದ್ದ ಅವರು, ಜಮೀನಿನಲ್ಲಿಯೇ ತೆನೆಗಳನ್ನು ರಾಶಿ ಮಾಡಿದ್ದರು. ಅಕ್ಟೋಬರ್ 12ರಂದು ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯ ಅವಧಿಯಲ್ಲಿ ಮೆಕ್ಕೆಜೋಳ ತೆನೆಯ ರಾಶಿಗೆ ಬೆಂಕಿ ತಗುಲಿತ್ತು. ಕೆಲ ನಿಮಿಷಗಳಲ್ಲಿಯೇ ಇಡೀ ರಾಶಿ ಸುಟ್ಟು ಕರಕಲಾಗಿದೆ’ ಎಂದು ತಿಳಿಸಿದರು.</p>.<p>‘ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಅಂಗರಗಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಹಾಕಿದ್ದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿ ಅವಘಡ ಸಂಭವಿಸಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಅಂಗರಗಟ್ಟಿ ಗ್ರಾಮದ ನಿವಾಸಿ ನಾಗರಾಜ ಗುಡ್ಡಪ್ಪ ಹಾದಿಮನಿ ಎಂಬುವವರಿಗೆ ಸೇರಿದ್ದ ಮೆಕ್ಕೆಜೋಳದ ರಾಶಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಇದರಿಂದಾಗಿ ₹ 6.50 ಲಕ್ಷ ನಷ್ಟವಾಗಿದ್ದು, ನಾಗರಾಜ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಬ್ಯಾಡಗಿ ಪೊಲೀಸರು ಹೇಳಿದರು.</p>.<p>‘ರೈತ ನಾಗರಾಜ ಅವರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 12 ಎಕರೆ 37 ಗುಂಟೆಯಲ್ಲಿ ಮೆಕ್ಕೆಜೋಳ ಬೆಳೆ ಬೆಳೆದಿದ್ದರು. ಅದೇ ಬೆಳೆಯನ್ನು 8 ದಿನಗಳ ಹಿಂದೆಯಷ್ಟೇ ಕಟಾವು ಮಾಡಿದ್ದ ಅವರು, ಜಮೀನಿನಲ್ಲಿಯೇ ತೆನೆಗಳನ್ನು ರಾಶಿ ಮಾಡಿದ್ದರು. ಅಕ್ಟೋಬರ್ 12ರಂದು ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯ ಅವಧಿಯಲ್ಲಿ ಮೆಕ್ಕೆಜೋಳ ತೆನೆಯ ರಾಶಿಗೆ ಬೆಂಕಿ ತಗುಲಿತ್ತು. ಕೆಲ ನಿಮಿಷಗಳಲ್ಲಿಯೇ ಇಡೀ ರಾಶಿ ಸುಟ್ಟು ಕರಕಲಾಗಿದೆ’ ಎಂದು ತಿಳಿಸಿದರು.</p>.<p>‘ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>