<p><strong>ಹಾವೇರಿ:</strong>ತಾಲ್ಲೂಕಿನ ವೆಂಕಟಾಪುರ ಗ್ರಾಮದ ಬಳಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಕಬ್ಬಿನ ಜಮೀನಿಗೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ರೈತರು ಹರಸಾಹಸಪಟ್ಟರು.</p>.<p>ಸುಭಾನಲಿ ಮೆಳ್ಳಾಗಟ್ಟಿ ಎಂಬುವವರಿಗೆ ಸೇರಿದ ಜಮೀನು ಇದಾಗಿದೆ. ಮೂರು ಎಕರೆಯಲ್ಲಿ ಫಲವತ್ತಾಗಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದ್ದು, ₹4 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಬೆಳೆ ಕಳೆದುಕೊಂಡ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.</p>.<p>ವಿದ್ಯುತ್ ತಂತಿಗಳಿಂದ ಈ ಅವಘಡ ನಡೆದಿದ್ದು, ಹೆಸ್ಕಾ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p class="Subhead"><strong>5 ಎಕರೆ ಕಬ್ಬು ನಾಶ:</strong></p>.<p>ಹಾವೇರಿ ತಾಲ್ಲೂಕಿನ ಗೌರಾಪುರ ಗ್ರಾಮದ ಹೊರವಲಯದಲ್ಲಿ ಸೋಮವಾರ ಅಗ್ನಿಸ್ಪರ್ಶದಿಂದ 5 ಎಕರೆ ಕಬ್ಬು ನಾಶವಾಗಿದೆ.</p>.<p>ಮಾಲತೇಶ ಎಂಬುವರಿಗೆ ಈ ಜಮೀನು ಸಂಬಂಧಪಟ್ಟಿದೆ. ಬೋರ್ವೆಲ್ ಮೋಟಾರ್ನಿಂದ ಉಂಟಾದ ಕಿಡಿ ಕಬ್ಬಿನ ಗದ್ದೆಗೆ ತಗುಲಿ ಅವಘಡ ಸಂಭವಿಸಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು.</p>.<p>ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>ತಾಲ್ಲೂಕಿನ ವೆಂಕಟಾಪುರ ಗ್ರಾಮದ ಬಳಿ ಮಂಗಳವಾರ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಕಬ್ಬಿನ ಜಮೀನಿಗೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ರೈತರು ಹರಸಾಹಸಪಟ್ಟರು.</p>.<p>ಸುಭಾನಲಿ ಮೆಳ್ಳಾಗಟ್ಟಿ ಎಂಬುವವರಿಗೆ ಸೇರಿದ ಜಮೀನು ಇದಾಗಿದೆ. ಮೂರು ಎಕರೆಯಲ್ಲಿ ಫಲವತ್ತಾಗಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದ್ದು, ₹4 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಇದೀಗ ಬೆಳೆ ಕಳೆದುಕೊಂಡ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.</p>.<p>ವಿದ್ಯುತ್ ತಂತಿಗಳಿಂದ ಈ ಅವಘಡ ನಡೆದಿದ್ದು, ಹೆಸ್ಕಾ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p class="Subhead"><strong>5 ಎಕರೆ ಕಬ್ಬು ನಾಶ:</strong></p>.<p>ಹಾವೇರಿ ತಾಲ್ಲೂಕಿನ ಗೌರಾಪುರ ಗ್ರಾಮದ ಹೊರವಲಯದಲ್ಲಿ ಸೋಮವಾರ ಅಗ್ನಿಸ್ಪರ್ಶದಿಂದ 5 ಎಕರೆ ಕಬ್ಬು ನಾಶವಾಗಿದೆ.</p>.<p>ಮಾಲತೇಶ ಎಂಬುವರಿಗೆ ಈ ಜಮೀನು ಸಂಬಂಧಪಟ್ಟಿದೆ. ಬೋರ್ವೆಲ್ ಮೋಟಾರ್ನಿಂದ ಉಂಟಾದ ಕಿಡಿ ಕಬ್ಬಿನ ಗದ್ದೆಗೆ ತಗುಲಿ ಅವಘಡ ಸಂಭವಿಸಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು.</p>.<p>ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>